Webdunia - Bharat's app for daily news and videos

Install App

ಶಾಸಕ ಶೈಲೇಂದ್ರಗೆ ಚುಟುಕಿ ಹೊಡೆದು ಸವಾಲು ಹಾಕಿದ ಇನ್‌ಸ್ಪೆಕ್ಟರ್‌ ಕೊರವಿ ಅಮಾನತು

Sampriya
ಶುಕ್ರವಾರ, 6 ಡಿಸೆಂಬರ್ 2024 (15:21 IST)
Photo Courtesy X
ಬೀದರ್‌: ಬೀದರ್‌ ದಕ್ಷಿಣ ಕ್ಷೇತ್ರದ ಬಿಜೆಪಿ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ವ್ಯಕ್ತವಾದ ಬೆನ್ನಲ್ಲೇ ಸಾರಿಗೆ ಇಲಾಖೆಯ ಮೋಟಾರ್‌ ವಾಹನ ಇನ್‌ಸ್ಪೆಕ್ಟರ್‌ ಮಂಜುನಾಥ ಕೊರವಿ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ಬೆಲ್ದಾಳೆ ಅವರೊಂದಿಗಿನ ಸಂಭಾಷಣೆಯ ವಿಡಿಯೊಗಳು ಚರ್ಚೆಗೆ ಕಾರಣವಾಗಿತ್ತು. ಬಳಿಕ ಮಂಜುನಾಥ ಕೊರವಿ ಅವರನ್ನು ಸಾರಿಗೆ ಇಲಾಖೆಯ ಕಾಗದ ಪತ್ರಗಳ ವಿಭಾಗಕ್ಕೆ ವರ್ಗ ಮಾಡಲಾಗಿತ್ತು. ಇದೀಗ ಶಾಸಕ ಬೆಲ್ದಾಳೆ ಅವರು ಕೊರವಿ ವಿರುದ್ಧ ಸರ್ಕಾರಕ್ಕೆ ಹಕ್ಕುಚ್ಯುತಿ ಕುರಿತು ದೂರು ಸಲ್ಲಿಸಿದ ಕಾರಣ ಅಮಾನತುಗೊಳಿಸಲಾಗಿದೆ.

ಆದೇಶದಲ್ಲಿ ಅಮಾನತು ಅವಧಿ ಕೊನೆಗೊಂಡ ನಂತರ ಜಾರಿಗೆ ಬರುವಂತೆ ಬೆಳಗಾವಿ ಜಿಲ್ಲೆಯ ರಾಮದುರ್ಗದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ವರ್ಗಾಯಿಸಿ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಘಟನೆ ಹಿನ್ನೆಲೆ: ಕಳೆದ ಅಕ್ಟೋಬರ್‌ 29ರ ರಾತ್ರಿ 10ಗಂಟೆ ಸುಮಾರಿಗೆ ಶಾಸಕ ಬೆಲ್ದಾಳೆ ಅವರು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾಲ್ಕಿ ರಸ್ತೆ ಮೂಲಕ ತೆರಳುತ್ತಿದ್ದರು. ನೌಬಾದ್‌- ಲಾಲ್‌ಬಾಗ್‌ ಸಮೀಪ ರಸ್ತೆಯ ಎರಡೂ ಬದಿ ವಾಹನಗಳನ್ನು ತಡೆದು ನಿಲ್ಲಿಸಲಾಗಿತ್ತು. ಇದನ್ನು ನೋಡಿದ ಶಾಸಕರು ಮಂಜುನಾಥ ಬಳಿ ತೆರಳಿ ರಾತ್ರಿ ಹೊತ್ತು ಇಷ್ಟೊಂದು ವಾಹನಗನ್ನು ಯಾಕೆ ತಡೆದು ನಿಲ್ಲಿಸಿದ್ದೀರಿ. ಮಹಿಳೆಯರು, ಮಕ್ಕಳು ರಸ್ತೆಬದಿ ನಿಂತಿದ್ದಾರೆ. ಬೇಗ ಪರಿಶೀಲಿಸಿ ಕಳಿಸಿಕೊಡಬೇಕು. ಹೆಲ್ಮೆಟ್‌ ಇದ್ದರೂ ಬೈಕ್‌ ಸವಾರರನ್ನೇಕೆ ತಡೆದಿದ್ದೀರಿ? ಜನರಿಗೆ ತೊಂದರೆ ಕೊಡಬೇಡಿ ಎಂದು ಹೇಳಿದ್ದಾರೆ.

ಇದರಿಂದ ಕೆರಳಿದ ಮಂಜುನಾಥ, ನಿಮ್ಮಂಥ ಲೀಡರ್‌ಗಳನ್ನು ಎಲ್ಲೆಡೆ ನೋಡಿದ್ದೇನೆ. ನೀವು ಮಂತ್ರಿ, ಎಂಎಲ್‌ಎ ಇರಬಹುದು. ನೀವು ಎಂಎಲ್‌ಎ ಅಂತ ನನಗೆ ಗೊತ್ತಿಲ್ಲ. ನಿಮ್ಮನ್ನು ಫಸ್ಟ್‌ ಟೈಮ್‌ ನೋಡ್ತಾ ಇದ್ದೀನಿ ಎಂದು ಶಾಸಕರು ಹಾಗೂ ಅವರ ಬೆಂಬಲಿಗರತ್ತ ಕೈಎತ್ತಿ ಚುಟುಕಿ ಹೊಡೆದು ಸವಾಲು ಹಾಕುವ ರೀತಿಯಲ್ಲಿ ಮಾತನಾಡಿದ್ದರು.'<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments