Select Your Language

Notifications

webdunia
webdunia
webdunia
webdunia

ಹೈಕೋರ್ಟ್‌ ತ್ರಿ ಸದಸ್ಯ ಪೀಠʼದಿಂದ ಮಧ್ಯಂತರ ಆದೇಶ ಪ್ರಕಟ

ಹೈಕೋರ್ಟ್‌ ತ್ರಿ ಸದಸ್ಯ ಪೀಠʼದಿಂದ ಮಧ್ಯಂತರ ಆದೇಶ ಪ್ರಕಟ
bangalore , ಶುಕ್ರವಾರ, 11 ಫೆಬ್ರವರಿ 2022 (17:14 IST)
ಬೆಂಗಳೂರು:-ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಾಗಿ ತ್ರಿ ಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದ್ದು, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನ ಬಳಸಬಾರದು ಎಂದಿದೆ.
ಈ ಕುರಿತು ಮೌಖಿಯ ಆದೇಶ ನೀಡಿದ ಹೈಕೋರ್ಟ್ ಸಿಜೆ, ' ಮುಂದಿನ ವಿಚಾರಣೆಯನ್ನ ಸೋಮವಾರ ಮಧ್ಯಹ್ನ 2.30ರವರೆಗೆ ಮುಂದೂಡಲಾಗಿದೆ. ಈಗ ಈಗ ಮಧ್ಯಂತರ ಆದೇಶ ನೀಡಲು ಬಯಸುತ್ತೇವೆ.
 
ಅದ್ರಂತೆ, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನ ಬಳಸಬಾರದು. ವಿಚಾರಣೆ ಮುಗಿಯುವವರೆಗೂ ಶಾಲಾ-ಕಾಲೇಜುಗಳಲ್ಲಿ ಹಿಜಾಬ್-ಶಾಲು ಧರಿಸುವಂತಿಲ್ಲ' ಎಂದಿದ್ದಾರೆ.
'ರಾಜ್ಯದಲ್ಲಿ ಶಾಂತಿ ನೆಮ್ಮದಿ ಮರಳಬೇಕು.ಕೆಲವು ದಿನಗಳ ಕಾಲ ನೀವು ನಿಮ್ಮ ನಂಬಿಕೆ ಬಿಡುವುದು ಒಳ್ಳೆಯದು. ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುತ್ತೇವೆ. ಅಲ್ಲಿಯವರೆಗೆ ಧಾರ್ಮಿಕ ಗುರುತುಗಳನ್ನ ಬಳಸಬಾರದು' ಎಂದಿದ್ದಾರೆ. ಇನ್ನು ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನ ಶೀಘ್ರದಲ್ಲೇ ಪ್ರಾರಂಭಿಸಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಪಿಎಸ್ಸಿ, ಪಿಎಸ್‌ ಐ, ಪಿಡಿಓ ಪರೀಕ್ಷೆಗಳಿಗೆ ಉಚಿತ ತರಬೇತಿ