ಕಾಮಗಾರಿಯಲ್ಲಿ ಅಕ್ರಮ: ತನಿಖೆಗೆ ಸಿಎಂ ಆದೇಶ

Webdunia
ಗುರುವಾರ, 13 ಜುಲೈ 2023 (13:34 IST)
ಕೋಲಾರ : ಯರಗೋಳ ಡ್ಯಾಂ ಯೋಜನೆಯಲ್ಲಿ ಕೋಟ್ಯಂತರ ರೂ. ಅಕ್ರಮವಾಗಿದ್ದು ಯೋಜನೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ.

ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಈ ಆರೋಪ ಮಾಡಿದ್ದು, ಸೂಕ್ತ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಬಂಗಾರಪೇಟೆ ತಾಲೂಕಿನ ಯರಗೋಳ ಗ್ರಾಮದ ಬಳಿ ಈ ಡ್ಯಾಂ ನಿರ್ಮಾಣವಾಗಿದೆ. ಪೈಪ್ ಲೈನ್ ಸೇರಿದಂತೆ ನೀರು ಸರಬರಾಜು ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಈ ಕಾಮಗಾರಿ ನಡೆಸಿತ್ತು. 

ಸುಮಾರು 160 ಕೋಟಿ ರೂ. ವೆಚ್ಚದಲ್ಲಿ ಡ್ಯಾಂ ನಿರ್ಮಾಣ ಮಾಡಲಾಗಿದೆ. ಇನ್ನೂ ನೀರು ಪೂರೈಕೆಗೆ 79 ಕೋಟಿ ರೂ. ಹಣ ಮಂಜೂರು ಮಾಡಲಾಗಿದೆ. ಒಟ್ಟು 249 ಕೋಟಿ ರೂ. ಯೋಜನೆಗೆ ಹಣ ಮಂಜೂರು ಪ್ರಕ್ರಿಯೆ ನಡೆದಿದೆ. ಆದರೆ ಡ್ಯಾಂ ನಿರ್ಮಾಣ, ಪೈಪ್ ಲೈನ್ ಅಳವಡಿಕೆ, ಓವರ್ ಹೆಡ್ ಟ್ಯಾಂಕ್ ನಿರ್ಮಾಣದಲ್ಲಿ ನಿಗದಿಗಿಂತಲೂ ಹೆಚ್ಚುವರಿಯಾಗಿ ಹಣ ಮಂಜೂರು ಮಾಡಿರುವ ಆರೋಪವನ್ನ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಿಶಿಷ್ಠ ಜಾತಿಗಳಿಗೆ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿದ್ರು: ಬಿವೈ ವಿಜಯೇಂದ್ರ

ದೈವದ ಭಂಡಾರ ಕೊಂಡೊಯ್ಯುವಾಗ ಸಂಕ ಮುರಿದು ಬಿದ್ದು 8 ಮಂದಿಗೆ ಗಾಯ Video

ಕ್ಯಾಬಿನೆಟ್ ಸಭೆಗೆ ಚಕ್ಕರ್ ಹಾಕಿ ಹೈಕಮಾಂಡ್ ಗೇಟ್ ಕಾದರೂ ಪ್ರಯೋಜನವಿಲ್ಲ: ಡಿಕೆಶಿಗೆ ಬಿಜೆಪಿ ಟಾಂಗ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments