Webdunia - Bharat's app for daily news and videos

Install App

ಹೊಸ ಕ್ರಿಮಿನಲ್ ಕಾನೂನುಗಳು ದರ್ಶನ್, ಪ್ರಜ್ವಲ್, ಸೂರಜ್ ರೇವಣ್ಣ ಕೇಸ್ ಗೆ ಅನ್ವಯವಾಗಲಿದೆಯೇ

Krishnaveni K
ಸೋಮವಾರ, 1 ಜುಲೈ 2024 (14:18 IST)
ಬೆಂಗಳೂರು: ಇಂದಿನಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಬ್ರಿಟಿಷ್ ಕಾಲದ ದಂಡಸಂಹಿತೆ ಕಾನೂನುಗಳ ಬದಲಾಗಿ ಹೊಸ ದೇಸೀಯ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರಲಾಗಿದೆ.

ಆದರೆ ಇದೀಗ ವಿಚಾರಣೆ ಹಂತದಲ್ಲಿರುವ ಪ್ರಕರಣಗಳಿಗೆ ಈ ಹೊಸ ಕಾನೂನಿನ ಮಾನದಂಡಗಳು ಅನ್ವಯವಾಗುತ್ತದೆಯೇ ಎಂಬ ಅನುಮಾನ ಅನೇಕರಲ್ಲಿದೆ. ಅದರಲ್ಲೂ ವಿಶೇಷವಾಗಿ ರಾಜ್ಯದಲ್ಲಿ ನಡೆಯುತ್ತಿರುವ ಹೈ ಪ್ರೊಫೈಲ್ ಕೇಸ್ ಗಳಾದ ನಟ ದರ್ಶನ್ ಕೇಸ್, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಈ ಹೊಸ ಕಾನೂನುಗಳು ಅನ್ವಯವಾಗುತ್ತದೆಯೇ ಎಂಬ ಅನುಮಾನವಿದೆ.

ಇದಕ್ಕೆ ಇಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಇದಕ್ಕೆ ಮೊದಲು ನಡೆದ ಪ್ರಕರಣಗಳ ವಿಚಾರಣೆ ಈ ಹಿಂದಿನ ಕಾನೂನು ರೀತಿಯಲ್ಲೇ ನಡೆಯಲಿದೆ. ಆದರೆ ಇಂದಿನಿಂದ ನಂತರ ದಾಖಲಾಗುವ ಪ್ರಕರಣಗಳ ವಿಚಾರಣೆ ಹೊಸ ಕಾನೂನಿನ್ವಯ ನಡೆಯಲಿದೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಪೊಲೀಸರಿಗೆ ತರಬೇತಿ ನೀಡಲಾಗಿದೆ. ಮಾಹಿತಿಗಾಗಿ ಪ್ರತ್ಯೇಕ ಆಪ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಮಾಹಿತಿ ತಿಳಿದುಕೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಹೊಸ ಕಾನೂನಿನ ಅನ್ವಯ ಕೊಲೆ, ಲೈಂಗಿಕ ದೌರ್ಜನ್ಯ, ಹಲ್ಲೆ ಇತ್ಯಾದಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸಿ 60 ದಿನಗಳೊಳಗೆ ಆರೋಪ ಪಟ್ಟಿ ಸಲ್ಲಿಸಬೇಕು. 45 ದಿನಗಳೊಳಗೆ ಶಿಕ್ಷೆ ಘೋಷಣೆ ಮಾಡಬೇಕು. ಇದರಿಂದ ತ್ವರಿತವಾಗಿ ಕ್ರಿಮಿನಲ್ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಗಲಿದೆ. ಜೊತೆಗೆ ಕೊಲೆ, ಅಪಹರಣ, ಹಲ್ಲೆ, ಅತ್ಯಾಚಾರ ಇತ್ಯಾದಿಗಳ ದಂಡ ಸಂಹಿತೆ ಕೂಡಾ ಬದಲಾಗಿದೆ.

ಆದರೆ ಇವೆಲ್ಲವೂ ಇಂದಿನಿಂದ ದಾಖಲಾಗುವ ಪ್ರಕರಣಗಳಿಗೆ ಮಾತ್ರ ಸೀಮಿತವಾಗಲಿದೆ. ದರ್ಶನ್ ತೂಗುದೀಪ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣರ ಪ್ರಕರಣಗಳು ಈಗಾಗಲೇ ದಾಖಲಾಗಿದ್ದು, ವಿಚಾರಣೆ ಹಂತದಲ್ಲಿದೆ. ಈ ಪ್ರಕರಣಗಳಿಗೆ ಈ ಹೊಸ ಕಾಯಿದೆಗಳು ಅನ್ವಯವಾಗದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ