Webdunia - Bharat's app for daily news and videos

Install App

ಕುವೆಂಪುಗೆ ಅಪಮಾನ ಮಾಡಿದವರು ನಾವಲ್ಲ ನೀವು-ವಿಜಯೇಂದ್ರ

geetha
ಸೋಮವಾರ, 19 ಫೆಬ್ರವರಿ 2024 (17:30 IST)
ಬೆಂಗಳೂರು : ಕುವೆಂಪು ಅವರ ಧ್ಯೇಯವಾಕ್ಯವನ್ನು “ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ” ಎಂದು ತಿದ್ದುಪಡಿ ಮಾಡಲಾಗಿದೆ. ಇದು ಕುವೆಂಪು ಅವರಿಗೆ ಮಾಡಿರುವ ಅಪಮಾನ. ಇದನ್ನು ಮಾಡಲು ಸಮಾಜ ಕಲ್ಯಾಣ ಇಲಾಖೆಯ ಮುಖ್ಯಕಾರ್ಯದರ್ಶಿಗೆ ಅಧಿಕಾರ ನೀಡಿದವರು ಯಾರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದರು. ವಸತಿ ಶಾಲೆಗಳಲ್ಲಿ ಅಳವಡಿಸಲಾಗಿರುವ ರಾಷ್ಟ್ರಕವಿ ಕುವೆಂಪು ಅವರ “ಜ್ಞಾನದೇಗುಲವಿದು ಕೈಮುಗಿದು ಒಳಗೆ ಬಾ” ಎಂಬ ವಾಕ್ಯವನ್ನು ತಿದ್ದುಪಡಿ ಮಾಡಿರುವ ವಿಷಯ ಸೋಮವಾರ ಅಧಿವೇಶನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ನಡುವೆ ವಾಗ್ಯುದ್ಧಕ್ಕೆ ಕಾರಣವಾಯಿತು.

ಸಭಾಪತಿ ಯು.ಟಿ.ಖಾದರ್‌ ಇದಕ್ಕೆ ಉತ್ತರಿಸಿ, ಸಮಾಜ ಕಲ್ಯಾಣ ಇಲಾಖೆ ಸಚಿವರು ಇದಕ್ಕೆ ನಾಳೆ ಉತ್ತರ ನೀಡಲಿದ್ದಾರೆ ಎಂದರೂ ಬಿಜೆಪಿಯವರಿಗೆ ಸಮಾಧಾನವಾಗಲಿಲ್ಲ. ಈ ವೇಳೆ ಎದ್ದು ನಿಂತ ಸಚಿವ ಕೃಷ್ಣ ಬೈರೇಗೌಡ, ಕುವೆಂಪು ಅವರ ಪಠ್ಯವನ್ನೇ ಪಠ್ಯಪುಸ್ತಕದಿಂದ ತೆಗೆದವರು ನೀವು ಜಾಡಿಸಿದರು. ಇದಕ್ಕೆ ಬಿಜೆಪಿಯವರು ಕೆರಳಿ ಕೆಂಡಾಮಂಡಲವಾಗಿ ವಾಗ್ಬಾಣಗಳನ್ನು ತೂರಲಾರಂಭಿಸಿದ ಕಾರಣ ಸದನದಲ್ಲಿ ಕೆಲಕಾಲ ಕೋಲಾಹಲ ಉಂಟಾಯ್ತು. ಕೊನೆಗೆ ಯು.ಟಿ.ಖಾದರ್‌ ನಾಳೆ ಉತ್ತರ ಸಿಗಲಿದೆ ಎಂದು ಉಭಯ ಪಕ್ಷದವರನ್ನೂ ಸಮಧಾನ ಪಡಿಸಿ ಚರ್ಚೆಗೆ ಮಂಗಳ ಹಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments