ಜನೋತ್ಸವ ಕಾರ್ಯಕ್ರಮ ನಾಳೆ ನಡೆಯಲಿದೆ : ಸುಧಾಕರ್

Webdunia
ಬುಧವಾರ, 7 ಸೆಪ್ಟಂಬರ್ 2022 (14:26 IST)
ಚಿಕ್ಕಬಳ್ಳಾಪುರ : ನಿಗದಿಯಂತೆ ನಾಳೆ(ಗುರುವಾರ) ಜನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಾಳೆ ಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಸಂಬಂಧ ಆಡಿಯೋ ಸಂದೇಶ ಕಳುಹಿಸಿರುವ ಸಚಿವರು, ಪ್ರೋಗ್ರಾಂ ಈಸ್ ಆನ್. ಎಲ್ಲಾ ಮುಖಂಡರು ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಬರಬೇಕು.

ಈಗಿನಿಂದಲೇ ಎಲ್ಲಾ ಮುಖಂಡರಿಗೂ ಹೇಳಿಬಿಡಿ. ಕಾರ್ಯಕ್ರಮ ಮುಂದುವರಿಯುತ್ತೆ. 8 ಗಂಟೆಗೆ ಸರಿಯಾಗಿ ಕಾರ್ಯಕ್ರಮ ನಡೆಯುತ್ತೆ. ಎಲ್ಲರಿಗೂ ನೀಡಿದ ಜವಾಬ್ದಾರಿಯನ್ನು ಚಾಚು ತಪ್ಪದಂತೆ ಮಾಡಿ. ನಾನು ಎಲ್ಲವನ್ನೂ ಗಮನಿಸುತ್ತಿರುತ್ತೇನೆ ಎಂದು ತಿಳಿಸಿದ್ದಾರೆ.

ಸದ್ಯ ಉಮೇಶ್ ಕತ್ತಿ ನಿಧನಕ್ಕೆ 1 ದಿನ ಶೋಕಾಚರಣೆ ನಡೆಸುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದರು. ಈಗ ಶೋಕಾಚರಣೆ ನಡುವೆ ಸರ್ಕಾರ ಜನೋತ್ಸವಕ್ಕೆ ಸಂಪೂರ್ಣ ಸಿದ್ಧತೆ ನಡೆಸಲಾಗುತ್ತಿದೆ.

ಸಚಿವ ಉಮೇಶ್ ಕತ್ತಿ ನಿಧನದ ನಡುವೆಯೂ ನಾಳೆ ಜನೋತ್ಸವ ಬೇಡ ಎಂಬ ಅಭಿಪ್ರಾಯವನ್ನು ಹಲವು ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಆದರೆ ಈಗ ಈ ಕಾರ್ಯಕ್ರಮ ನಿಗದಿಯಂತೆ ನಡೆಯಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎಂಥಾ ಮುಗ್ಧ ಈತ..ಸಾಕಿದ ಹಸುವಿನ ಸಾವಿಗೆ ಮಗುವಿನಂತೆ ಅತ್ತ ರೈತನ ನೋಡಿದ್ರೆ ಕಣ್ಣೀರೇ ಬರುತ್ತೆ

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮೇಲೂ ಮಾವನ ಜೀವ ಉಳಿಸಿದ ಅಳಿಯ: ವಿಷಯ ತಿಳಿದ ಪತ್ನಿ ಮಾಡಿದ್ದೇನು ನೋಡಿ

ಅಮ್ಮ ಹೆಸರಿಗೇ ಕಳಂಕ ಇವಳು.. ಹೆತ್ತ ಮಗಳನ್ನು ಕೊಂದು ಲವ್ವರ್ ಜೊತೆ ಬಿರಿಯಾನಿ ಪಾರ್ಟಿ ಮಾಡಿದಳು

ಧರ್ಮಸ್ಥಳ ಪ್ರಕರಣದಲ್ಲಿ ನನ್ನ ಹೆಸರು ದುರುಳರ ಪಿತೂರಿ ಎಂದ ಪ್ರಕಾಶ್ ರಾಜ್: ಬೆಂಕಿ ಇಲ್ಲದೆ ಹೊಗೆ ಆಡುತ್ತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments