Select Your Language

Notifications

webdunia
webdunia
webdunia
webdunia

ಮತ್ತೆ ಶುರುವಾಗಿದೆಯಾ ಕಾಂಗ್ರೆಸ್ ಜಟಾಪಟಿ?

ಕಾಂಗ್ರೆಸ್
ಮತ್ತೆ ಶುರುವಾಗಿದೆಯಾ ಕಾಂಗ್ರೆಸ್ ಜಟಾಪಟಿ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಅತೃಪ್ತ ಶಾಸಕ ಮಹೇಶ್ ಕುಮಠಳ್ಳಿ ಕ್ಷೇತ್ರದಿಂದ ನಾಪತ್ತೆಯಾಗಿದ್ದಾರೆ.

ಜನೇವರಿ 26 ರ ಗಣರಾಜ್ಯೋತ್ಸವ ಮುಗಿಸಿ ಮತ್ತೆ ನಾಪತ್ತೆ ಆಗಿರುವ ರಮೇಶ್ ಜಾರಕಿಹೋಳಿ ಬೆಂಬಲಿಗ ಮಹೇಶ್ ಕುಮಠಳ್ಳಿ ಅವರ ಕ್ರಮದಿಂದ ರಾಜಕೀಯ ವಲಯದಲ್ಲಿ ಚರ್ಚೆಗಳು ಮತ್ತೆ ಶುರುವಾಗಿವೆ.

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಕಾಂಗ್ರೆಸ್ ಮುಖಂಡರಲ್ಲಿ‌ ಸಂಚಲನ ಸೃಷ್ಟಿಯಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದ ಶಾಸಕ ಮಹೇಶ್ ಕುಮಠಳ್ಳಿ, ಈ ಹಿಂದೆ ಹತ್ತು ದಿನಗಳ ಕಾಲ ಮುಂಬಯಿ ಯಲ್ಲಿ ವಾಸ್ತವ್ಯ ಹೂಡಿದ್ದರು. ಆಗ ಶಾಸಕ ಮಹೇಶ್ ಕುಮಠಳ್ಳಿ ತಾವು ಬೆನ್ನು ನೋವಿನ ಚಿಕಿತ್ಸೆಗೆ ತೆರಳಿದ್ದಾಗಿ ತಿಳಿಸಿದ್ದರು. ಸದ್ಯ ಕೊಲ್ಹಾಪುರದಲ್ಲಿ ಇರುವುದಾಗಿ ಬಲ್ಲ ಮೂಲಗಳ ಮಾಹಿತಿ ಇದೆ.



Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ: ಸಕಲ ಸಿದ್ಧತೆ