Webdunia - Bharat's app for daily news and videos

Install App

ಸುಮಲತಾ ಓಲೈಸದೇ ಮಂಡ್ಯದಲ್ಲಿ ಜೆಡಿಎಸ್ ಗೆ ಉಳಿಗಾಲವಿಲ್ಲ

Krishnaveni K
ಭಾನುವಾರ, 24 ಮಾರ್ಚ್ 2024 (09:48 IST)
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಮೈತ್ರಿ ಪಕ್ಷ ಜೆಡಿಎಸ್ ಗೆ ಬಿಟ್ಟುಕೊಡುತ್ತಿದ್ದಂತೇ ಹಾಲಿ ಸಂಸದೆ, ಬಿಜೆಪಿ ಟಿಕೆಟ್ ಆಕಾಂಕ್ಷಿ ಸುಮಲತಾ ಅಸಾಮಾಧಾನಕ್ಕೆ ಕಾರಣವಾಗಿದೆ.

ಮಂಡ್ಯ ಟಿಕೆಟ್ ನನಗೇ ಸಿಗುತ್ತದೆ ಎಂದು ಕಾದು ಕುಳಿತಿದ್ದ ಸುಮಲತಾಗೆ ಬಿಜೆಪಿ ನಾಯಕರು ಶಾಕ್ ಕೊಟ್ಟಿದ್ದಾರೆ. ಮಂಡ್ಯದಿಂದ ಜೆಡಿಎಸ್ ನಾಯಕ ಕುಮಾರಸ್ವಾಮಿ ಕಣಕ್ಕಿಳಿಯುವ ಸಾಧ‍್ಯತೆ ದಟ್ಟವಾಗಿದೆ. ಇನ್ನೊಂದು ಗುಂಪು ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೂ ಒತ್ತಾಯಿಸುತ್ತಿದೆ.

ಅಂತೂ ಮಂಡ್ಯ ಜೆಡಿಎಸ್ ತೆಕ್ಕೆಗೆ ಎನ್ನುವುದು ಫಿಕ್ಸ್ ಆಗಿದೆ. ಆದರೆ ಈಗ ಮಂಡ್ಯದಲ್ಲಿ ಜೆಡಿಎಸ್ ನಿಂದ ಯಾರೇ ನಿಂತರೂ ಗೆಲ್ಲಬೇಕಾದರೆ ಸುಮಲತಾ ಅಂಬರೀಶ್ ರನ್ನು ಓಲೈಸುವ ಅನಿವಾರ್ಯತೆಯಿದೆ. ಒಂದು ವೇಳೆ ಸುಮಲತಾರನ್ನು ಕಡೆಗಣಿಸಿದರೆ ಅವರು ಪಕ್ಷೇತರರಾಗಿ ನಿಂತು ಸವಾಲು ಎಸೆಯಬಹುದು.

ಆಗ ಜೆಡಿಎಸ್ ಗೆ ಗೆಲ್ಲಲು ಕಷ್ಟವಾಗಬಹುದು. ಹೀಗಾಗಿ ಕುಮಾರಸ್ವಾಮಿ ಈಗಾಗಲೇ ಸುಮಲತಾ ನನ್ನ ಅಕ್ಕನ ಹಾಗೆ ಎಂದು ತೇಪೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ನಾಯಕರೂ ಸುಮಲತಾರನ್ನು ಸಮಾಧಾನಿಸುವ ಕೆಲಸ ಮಾಡಲೇಬೇಕಾಗಿದೆ. ಯಾಕೆಂದರೆ ಈಗಾಗಲೇ ಬಿಜೆಪಿ ಕೈಕೊಟ್ಟ ಮೇಲೆ ಸುಮಲತಾಗೆ ಆಪ್ತರು ಪಕ್ಷೇತರರಾಗಿ ನಿಲ್ಲಿ ಎಂದು ಸಲಹೆ ನೀಡುತ್ತಿದ್ದಾರೆ. ಒಂದು ವೇಳೆ ಅವರು ಪಕ್ಷೇತರರಾಗಿ ನಿಂತರೆ ಮತ ವಿಭಜನೆಯಾಗಬಹುದು. ಆಗ ಇದರ ಲಾಭವನ್ನು ಕಾಂಗ್ರೆಸ್ ಪಡೆಯಬಹುದು. ಹೀಗಾಗಿ ಈಗ ಸುಮಲತಾರನ್ನು ಓಲೈಸುವುದು ಜೆಡಿಎಸ್ ಗೆ ಅನಿವಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments