Webdunia - Bharat's app for daily news and videos

Install App

ಉಚ್ಛಾಟನೆಗೆ ಹೆದರಿ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ರು: ಜೆಡಿಎಸ್ ಲೇವಡಿ

Krishnaveni K
ಮಂಗಳವಾರ, 26 ಆಗಸ್ಟ್ 2025 (14:30 IST)
ಬೆಂಗಳೂರು: ಸದನದಲ್ಲಿ ಆರ್ ಎಸ್ಎಸ್ ಗೀತೆ ಹಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ದಕ್ಕೆ ಜೆಡಿಎಸ್ ಪಕ್ಷ ಲೇವಡಿ ಮಾಡಿದೆ. ಉಚ್ಛಾಟನೆಗೆ ಹೆದರಿ ಕ್ಷಮೆ ಯಾಚಿಸಿದರು ಎಂದಿದೆ.

ಮೊನ್ನೆಯಷ್ಟೇ ಸದನದಲ್ಲಿ ಡಿಕೆ ಶಿವಕುಮಾರ್ ಆರ್ ಎಸ್ಎಸ್ ಗೀತೆ ನಮಸ್ತೇ ಸದಾ ವತ್ಸಲೇ ಹಾಡನ್ನು ಹಾಡಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ನಲ್ಲಿ ಡಿಕೆಶಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇಂದು ಡಿಕೆಶಿ ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಯಾಚಿಸಿದ್ದಾರೆ.

ಇದರ ಬಗ್ಗೆ ಜೆಡಿಎಸ್ ಟ್ವೀಟ್ ಮಾಡಿ ಲೇವಡಿ ಮಾಡಿದೆ. ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ.

ವಿಧಾನಸಭೆಯಲ್ಲಿ #RSS ಗೀತೆ ಹಾಡಿ ಇಟಲಿ ಕಾಂಗ್ರೆಸ್‌ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ. 

ನಾಯಕ ಸಮುದಾಯದ ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್‌ ನೀಡಿರಲಿಲ್ಲ.  ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ’ ಎಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಮುಂದಿನ ಸುದ್ದಿ
Show comments