Publish Date: Wed, 17 Jun 2020 (18:24 IST)
Updated Date: Wed, 17 Jun 2020 (18:25 IST)
ಜೂನ್ 18 ರಂದು ರಾಜ್ಯಾದ್ಯಂತ ಮಾಸ್ಕ್ ಡೇ ಆಚರಣೆ ಮಾಡುವಂತೆ ಸಿಎಂ ಹೇಳಿದ್ದಾರೆ.
ರಾಜ್ಯದ ಜನರಿಗೆ ಮನವಿ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಕೊರೊನಾ ವೈರಸ್ ತಡೆಗೆ ಮುಂಜಾಗ್ರತಾ ಕ್ರಮವಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
ಆರೋಗ್ಯ ಇಲಾಖೆ ಹಾಗೂ ಸರಕಾರ ನೀಡುವ ಸೂಚನೆಗಳನ್ನು ಪಾಲಿಸಿ ಕೊರೊನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸಬೇಕೆಂದು ಹೇಳಿದ್ದಾರೆ.
ಇನ್ನು, ಕೋವಿಡ್ ಎಸ್.ಒ.ಪಿ. ಮಾರ್ಗಸೂಚಿಯಂತೆ ಕಾರ್ಯಕ್ರಮ ಆಯೋಜಿಸಬೇಕು. ಚುನಾಯಿತ ಪ್ರತಿನಿಧಿಗಳು, ಗಣ್ಯ ವ್ಯಕ್ತಿಗಳು, ವೈದ್ಯಕೀಯ ಸಿಬ್ಬಂದಿಗಳು ಒಳಗೊಂಡಂತೆ 50 ಜನ ಮೀರದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸುವ ಕುರಿತಂತೆ ಜಾಗೃತಿ ಮೂಡಿಸಲು ಮೆರವಣಿಗೆ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.