Webdunia - Bharat's app for daily news and videos

Install App

ಹುಟ್ಟುಹಬ್ಬದ ದಿನವೇ ಸೋಲಿನ ಕಹಿ ಉಂಡ ಕೆ.ಅಣ್ಣಾಮಲೈ

sampriya
ಮಂಗಳವಾರ, 4 ಜೂನ್ 2024 (16:28 IST)
Photo By X
ಚೆನ್ನೈ: ಪೊಲೀಸ್‌ ಇಲಾಖೆ ಕರ್ತವ್ಯಕ್ಕೆ ರಾಜೀನಾಮೆ ನೀಡಿ  ತಮಿಳುನಾಡಿನ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ತಮ್ಮ ಹುಟ್ಟು ಹಬ್ಬದ ದಿನವೇ ಸೋಲಿನ ಕಹಿಯಾಗಿದೆ.

ಇಂದು 40ನೇ ಹುಟ್ಟುಹಬ್ಬದಲ್ಲಿರುವ ಅಣ್ಣಾಮಲೈ ಅವರಿಗೆ  ಡಿಎಂಕೆ ಗಣಪತಿ ರಾಜ್‌ಕುಮಾರ್ ವಿರುದ್ಧ 17,366 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.

ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದ ಅಣ್ಣಾಮಲೈ ಅವರು ಗೆಲುವು ಸಾಧಿಸಲು ಮಾಸ್ಟರ್‌ ಪ್ಲಾನ್‌ ನಡೆಸಿದ್ದರು. ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಕೆ.ಅಣ್ಣಾಮಲೈ ಅವರು ಬಿರುಸಿನ ಪ್ರಚಾರ ಮಾಡಿ ಗೆಲುವಿಗಾಗಿ ಪಣ ತೊಟ್ಟಿದ್ದರು.

ಲೋಕಸಭೆ ಚುನಾವಣೆ ಘೋಷಣೆ ಆದ ಬೆನ್ನಲ್ಲೇ ಗೆಲುವಿನ ಲೆಕ್ಕಾಚಾರ ಹಾಕಿಕೊಂಡು ಕೆಲಸ ಶುರು ಮಾಡಿದ ಅಣ್ಣಾಮಲೈ ಅವರು ನಿರಂತರ ಪ್ರಚಾರ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹೊಸ ಹವಾ ಸೃಷ್ಟಿಸಿದ್ದರು. ಅದಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ ಅಣ್ಣಾಮಲೈ ಪರ ಮತಯಾಚನೆ ಮಾಡಿ, ರೋಡ್‌ ಶೋ ನಡೆಸಿದ್ದರು. ಆದರೆ ಈ ಎಲ್ಲ ಲೆಕ್ಕಚಾರ ಕೆಲಸವಾಗದೆ ಸೋಲು ಅನುಭವಿಸಿದ್ದಾರೆ.









 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments