Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕರ್ನಾಟಕ ಬಿಜೆಪಿ ಭಾರೀ ರಣತಂತ್ರ ಹೆಣೆದಿದೆ. ಕಾಂಗ್ರೆಸ್, ಜೆಡಿಎಸ್ ಕೋಟೆ ಮೇಲೆ ಕೇಸರಿ ಮಿಸೈಲ್ ಹಾರಿಸಲು ಪ್ಲ್ಯಾನ್ ಮಾಡಿಕೊಂಡಿದೆ.. ಒಕ್ಕಲಿಗ ಕ್ಷೇತ್ರಗಳನ್ನೇ ಟಾರ್ಗೆಟ್ ಮಾಡಿರುವ ಬಿಜೆಪಿ ಹೈಕಮಾಂಡ್, ಪ್ರಬಲ ಅಭ್ಯರ್ಥಿಗಳನ್ನು ಕಟ್ಟಿಹಾಕಲು ಪ್ಲ್ಯಾನ್ ಮಾಡಿಕೊಂಡಿದೆ.. ಹೊಳೆನರಸೀಪುರದಲ್ಲಿ ಮಾಜಿ ಸಚಿವ H.D. ರೇವಣ್ಣ ವಿರುದ್ಧ ಹಾಸನ ಶಾಸಕ ಪ್ರೀತಂಗೌಡ ಕಣಕ್ಕೆ ಇಳಿಯುವ ಸಾಧ್ಯತೆಯಿದ್ದು, ಈ ಕುರಿತು ಮಾಹಿತಿ ನೀಡುವುದಾಗಿ ಪ್ರೀತಂಗೌಡ ಆಶ್ಚರ್ಯ ಮೂಡಿಸಿದ್ದಾರೆ.. ವರಿಷ್ಠರ ಸೂಚನೆಗಾಗಿ ಪ್ರೀತಂಗೌಡ ಕಾಯುತ್ತಿದ್ದಾರೆ ಎನ್ನಲಾಗಿದೆ.. ಅಂತೆಯೇ ಅತ್ತ ಕನಕಪುರದಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್ ವಿರುದ್ಧ ಸಚಿವ ಆರ್. ಅಶೋಕ್ರನ್ನು ಬಿಜೆಪಿ ಹೈಕಮಾಂಡ್ ಕಣಕ್ಕಿಳಿಸುತ್ತಿದೆ.. ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ರೂಪಿಸಿದ್ದು, ಸಂಸದೆ ಸುಮಲತಾ ಮೂಲಕ ಜೆಡಿಎಸ್, ಕಾಂಗ್ರೆಸ್ಗೆ ಟಕ್ಕರ್ ಕೊಡಲು ತಯಾರಿ ನಡೆಸಿದ್ದಾರೆ.. ಅತ್ತ ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಸೋಮಣ್ಣರನ್ನು ಕಣಕ್ಕೆ ಇಳಿಸಲಾಗಿದೆ.