Webdunia - Bharat's app for daily news and videos

Install App

ಕನ್ನಡ ರಾಜ್ಯೋತ್ಸವ: ಇಂದಿನಿಂದ ಸರ್ಕಾರೀ ಅಧಿಕಾರಿಗಳಿಗೆ ಈ ಮಹತ್ವದ ಬದಲಾವಣೆ

Krishnaveni K
ಶುಕ್ರವಾರ, 1 ನವೆಂಬರ್ 2024 (08:47 IST)
ಬೆಂಗಳೂರು: ಇಂದು ನವಂಬರ್ 1 ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಕನ್ನಡ ತಾಯಿಯ ಹಬ್ಬಕ್ಕೆ ರಾಜ್ಯ ಸರ್ಕಾರ ಸರ್ಕಾರೀ ಅಧಿಕಾರಿಗಳಿಗೆ ಹೊಸ ಆದೇಶವೊಂದನ್ನು ಹೊರಡಿಸಿದೆ.

ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರೀ ಕಚೇರಿ ಸಿಬ್ಬಂದಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಕಡ್ಡಾಯವಾಗಿ ಕನ್ನಡ ಬಾವುಟದ ಟ್ಯಾಗ್ ಇರುವ ಐಡಿ ಕಾರ್ಡ್ ಬಳಕೆ ಮಾಡಲೇಬೇಕೆಂದು ಕಡ್ಡಾಯಗೊಳಿಸಿ ಆದೇಶ ನೀಡಿದ್ದಾರೆ.

ಸರ್ಕಾರೀ ಕಚೇರಿಯ ಎಲ್ಲಾ ಅಧಿಕಾರಿಗಳೂ ಕನ್ನಡ ರಾಜ್ಯೋತ್ಸವದೊಳಗಾಗಿ ಕಡ್ಡಾಯವಾಗಿ ತಮ್ಮ ಗುರುತಿನ ಚೀಟಿಗೆ ಕನ್ನಡ ಬಾವುಟದ ಬಣ್ಣವಾದ ಹಳದಿ-ಕೆಂಪು ಟ್ಯಾಗ್ ನ್ನೇ ಬಳಸಬೇಕು ಎಂದು ಆದೇಶ ಹೊರಡಿಸಲಾಗಿದೆ. ಈ ಮೂಲಕ ಕನ್ನಡಕ್ಕೆ ಗೌರವ ಸಲ್ಲಿಸಲು ಮುಂದಾಗಿದೆ. ಈ ಬಗ್ಗೆ ಈಗಾಗಲೇ ಎಲ್ಲಾ ಇಲಾಖೆಯ ಡಿಪಿಎಆರ್ ಗೆ ಸೂಚನೆ ನೀಡಲಾಗಿದೆ.

ಇದಲ್ಲದೆ, ಇಂದು ಕರ್ನಾಟಕದ ಎಲ್ಲಾ ಕಚೇರಿ, ಶಾಲೆ, ಕಾಲೇಜುಗಳು, ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸಾಕಷ್ಟು ಹೊರ ರಾಜ್ಯದ, ದೇಶದ ಕಂಪನಿಗಳೂ ಇವೆ. ಆದರೆ ಇವುಗಳೂ ಇಂದು ಕನ್ನಡ ಬಾವುಟ ಹಾರಿಸಿ ಕನ್ನಡಾಂಬೆಗೆ ಗೌರವ ನೀಡಲು ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments