Webdunia - Bharat's app for daily news and videos

Install App

Karnataka 2nd PU result: ಒಳ್ಳೆ ಮಾರ್ಕ್ ತೆಗೆದ್ರೆ ಆಯ್ತಲ್ವಾ, ಕಿರಿ ಕಿರಿ ಮಾಡ್ಬೇಡಿ ಎಂದಿದ್ದ ಟಾಪರ್ ಪ್ರೇರಣಾ

Sampriya
ಮಂಗಳವಾರ, 8 ಏಪ್ರಿಲ್ 2025 (20:27 IST)
Photo Courtesy X
ಉಡುಪಿ: ಇಂದು ರಾಜ್ಯದ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು,  ಪರೀಕ್ಷೆಯಲ್ಲಿ ಮಗಳು ಗಳಿಸಿದ ಫಲಿತಾಂಶದ ಬಗ್ಗೆ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಸುನೀಲ್ ಕುಮಾರ್ ಅವರ ಪುತ್ರಿ ಪ್ರೇರಣಾ ಶೇ 97 ಫಲಿತಾಂಶ ಪಡೆದಿದ್ದಾರೆ. ಮಗಳ ಪರಿಶ್ರಮದ ಬಗ್ಗೆ ಸುನೀಲ್ ಕುಮಾರ್ ಅವರು ಹೆಮ್ಮೆ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಅಭಿನಂದನೆಗಳು ಮಗಳೇ..
      ಮಗಳೇ ಓದಿಯಾಯ್ತಾ ಎಂದು ಪ್ರಶ್ನಿಸಿದಾಗಲೆಲ್ಲ " ಒಳ್ಳೆ ಮಾರ್ಕ್ಸ್ ತೆಗೆದರೆ ಆಯ್ತಲ್ವಾ ಈಗ ಕಿರಿಕಿರಿ ಮಾಡಬೇಡಿ" ಎಂದು ಹುಸಿಕೋಪ ಪ್ರದರ್ಶಿಸುತ್ತಿದ್ದ ಮುದ್ದಿನ ಮಗಳು ಪ್ರೇರಣಾ ದ್ವಿತೀಯ ಪಿಯು
ಪರೀಕ್ಷೆಯಲ್ಲಿ  ಶೇ.97 ರಷ್ಟು ಅಂಕ ಪಡೆದು ಉತ್ತೀರ್ಣಳಾಗಿದ್ದಾಳೆ.‌ ಪರೀಕ್ಷೆಯೆಂದರೆ ಮಕ್ಕಳಿಗಿಂತ ಹೆತ್ತವರಿಗೆ ಕಾಳಜಿ ಹೆಚ್ಚು. ಆದರೆ ನಾವೆಂದೂ ಅಂಕ ಗಳಿಕೆಯ ಒತ್ತಡವನ್ನು ಅವಳ ಮೇಲೆ ಹೇರಿರಲಿಲ್ಲ. ಆದರೆ ತನ್ನ ಜವಾಬ್ದಾರಿಯನ್ನು ಅರಿತು ಪರಿಶ್ರಮದಿಂದ ಓದಿದಳು. ಜ್ಞಾನಸುಧಾದ ಉಪನ್ಯಾಸಕರ ತಂಡ ಸೂಕ್ತ ಮಾರ್ಗದರ್ಶನ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಲೇಬೇಕು.
       ಒಬ್ಬ ವಿಧೇಯ ವಿದ್ಯಾರ್ಥಿನಿಯಾಗಿ ಓದು ಹಾಗೂ ಮುಂದಿನ ಗುರಿಯೆಡೆಗಿನ ನಿನ್ನ ಸ್ಪಷ್ಟತೆಯ ಬಗ್ಗೆ ನಾನು  ಹೆಮ್ಮೆ ಪಡುತ್ತೇನೆ. ವಿದ್ಯಾರ್ಥಿ ಜೀವನದಲ್ಲಿ ಸುಖಕ್ಕಿಂತ ಪರಿಶ್ರಮದ ಹಾದಿ ಮುಖ್ಯ ಎಂಬ ನಮ್ಮ ಕಿವಿ ಮಾತನ್ನು ಸದಾ ಮನಸಿನಲ್ಲಿಟ್ಟುಕೊಂಡಿದ್ದ ಮಗಳು   ಆರು ಬಾರಿ ಪೂರ್ವಸಿದ್ಧತಾ ಪರೀಕ್ಷೆ ಬರೆದು ನಿರಂತರ ಶ್ರಮ ವಹಿಸಿದ್ದಳು. ತನ್ನ ನಿರೀಕ್ಷೆಯಷ್ಟು ಅಂಕ ಬಂದಿಲ್ಲ ಎಂಬ ಬೇಸರ ಅವಳಿಗಿದ್ದರೂ ತಂದೆಯಾಗಿ ಅವಳ ಈ ಸಾಧನೆ ಸಂತೋಷ ನೀಡಿದೆ. ಮತ್ತೊಮ್ಮೆ ಅಭಿನಂದನೆಗಳು ಮಗನೆ...
         ಪುಸ್ತಕದ ಪಾಠದಷ್ಟೆ ಜೀವನದ ಪಾಠವೂ ಮುಖ್ಯ. ಆ ಸವಾಲನ್ನು ಅರ್ಥ ಮಾಡಿಕೊಳ್ಳುವುದೇ ನಿಜವಾದ ಭವಿಷ್ಯ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments