Webdunia - Bharat's app for daily news and videos

Install App

ಕರ್ನಾಟಕದಲ್ಲಿ ಬರೋಬ್ಬರಿ 6 ಲಕ್ಷ ಎಕರೆ ವಕ್ಫ್ ಬೋರ್ಡ್ ಗೆ ಮಾಡಲು ಹೊರಟಿದ್ದಾರೆ

Krishnaveni K
ಶುಕ್ರವಾರ, 15 ನವೆಂಬರ್ 2024 (14:56 IST)
ಬೆಂಗಳೂರು: ಕರ್ನಾಟಕದಲ್ಲಿ ವಕ್ಫ್ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಕರ್ನಾಟಕದಲ್ಲಿ ಸುಮಾರು 6 ಲಕ್ಷ ಎಕರೆ ಆಸ್ತಿಯನ್ನು ವಕ್ಫ್ ಬೋರ್ಡ್ ಗೆ ಮಾಡಲು ಹೊರಟಿದ್ದಾರೆ ಎಂದಿದ್ದಾರೆ.

ವಕ್ಫ್ ಎಂಬುದೇ ದೊಡ್ಡ ಮೋಸ. ಮೊದಲು ವಕ್ಫ್ ಮಂಡಳಿ ರದ್ದಾಗಬೇಕು. ಇದು ರಾಜ್ಯಕ್ಕೆ ಅಂಟಿದ ಶಾಪ. ಹೀಗಾಗಿ ಇದನ್ನು ನ್ಯಾಯಯುತವಾಗಿ ಬಗೆಹರಿಸಬೇಕು. ಖಬರಸ್ತಾನ ಹೆಸರಿನಲ್ಲಿ ಕಂದಾಯ ಇಲಾಖೆಯ 2,700 ಎಕರೆ ಕೊಡಲು ಹೊರಟಿದ್ದಾರೆ. ವಕ್ಫ್ ಗೆ ಎಷ್ಟು ಜಾಗ ಕೊಡಬೇಕು ಎಂದು ಅವರು ತೀರ್ಮಾನ ಮಾಡಿದ್ದಾರೆ. ಸುಮಾರು 6 ಲಕ್ಷ ಎಕರೆ ಆಸ್ತಿ ವಕ್ಫ್ ಗೆ ಮಾಡಲು ಹೊರಟಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ.

ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡುಗೆ ಧಮ್ಕಿ ಹಾಕಿ ವಕ್ಫ್ ತಿದ್ದುಪಡಿ ಬಾರದಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾವು ಜೆಪಿಸಿ ಕಮಿಟಿ ಮುಂದೆ ಎಲ್ಲಾ ದಾಖಲೆ ನೀಡಿದ್ದೇವೆ. ಜಮೀರ್ ಬಂದು ಅಧಿಕಾರಿಗಳಿಗೆ ಬೆದರಿಸಿ ನೋಟಿಸ್ ಕೊಡಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ನಿರ್ಧಾರ ಮಾಡುವವರೆಗೂ ಯಾವುದೇ ನೋಟಿಸ್ ಕೊಡಬೇಡಿ ಎಂದು ನಾವು ಸೂಚಿಸಿದ್ದೇವೆ. ಈ ಬಗ್ಗೆ ಜನ ಜಾಗೃತಿ ಮೂಡಿಸಲಿದ್ದೇವೆ ಎಂದು ಯತ್ನಾಳ್ ಹೇಳಿದ್ದಾರೆ.

ಬಿಜೆಪಿ ಪಕ್ಷದಿಂದಲೇ ಈ ಬಗ್ಗೆ ಜಾಗೃತಿ ಹೋರಾಟ ನಡೆಯಲಿದೆ. ಕೆಲವು ಕಡೆ ನೋಟಿಸ್ ಕೂಡಾ ನೀಡದೇ ವಕ್ಫ್ ಎಂದು ನಮೂದು ಮಾಡಲಾಗಿದೆ. ಕೆಲವು ಕಡೆ ನೋಟಿಸ್ ಕೊಟ್ಟು ವಾಪಸ್ ಮಾಡಿದ್ದಾರೆ. ವಕ್ಫ್ ಮಂಡಳಿಯೇ ರದ್ದಾಗಬೇಕು ಎಂಬುದು ನಮ್ಮ ಬೇಡಿಕೆ ಎಂದು ಯತ್ನಾಳ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments