Webdunia - Bharat's app for daily news and videos

Install App

ಕರ್ನಾಟಕ ಬಂದ್: ಸರ್ಕಾರೀ ಬಸ್ ಓಡಾಟದ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ ನೀಡಿದರೂ ಮುಗಿಯದ ಗೊಂದಲ

Krishnaveni K
ಶುಕ್ರವಾರ, 21 ಮಾರ್ಚ್ 2025 (14:01 IST)
ಬೆಂಗಳೂರು: ನಾಳೆ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ದಿನ ಸರ್ಕಾರೀ ಬಸ್ ಓಡಾಟವಿರುತ್ತದಾ ಎಂಬ ಪ್ರಶ್ನೆಗೆ ಸ್ವತಃ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರೇ ಹೇಳಿಕೆ ನೀಡಿದರೂ ಗೊಂದಲ ಮುಗಿದಿಲ್ಲ.
 

ಕರ್ನಾಟಕ ಬಂದ್ ಗೆ ಕೆಲವರು ಬೆಂಬಲ ವ್ಯಕ್ತಪಡಿಸಿಲ್ಲ. ಮತ್ತೆ ಕೆಲವರು ಕೇವಲ ನೈತಿಕ ಬೆಂಬಲ ಎನ್ನುತ್ತಿದ್ದಾರೆ.  ಶಾಲೆಗಳಿಗೆ ರಜೆ ಇರಲಿದೆಯೇ ಎಂಬುದಕ್ಕೆ ಸ್ಪಷ್ಟನೆ ಸಿಕ್ಕಿಲ್ಲ. ಈ ನಡುವೆ ಕನಿಷ್ಠ ಪಕ್ಷ ನಿತ್ಯದ ಓಡಾಟಕ್ಕೆ ಬಸ್ ಇರುತ್ತದಾ ಎಂಬ ಪ್ರಶ್ನೆ ಎಲ್ಲರಲ್ಲಿದೆ.

ಆ ಪ್ರಶ್ನೆಯನ್ನು ಸ್ವತಃ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಕೇಳಿದಾಗಲೂ ಗೊಂದಲ ಬಗೆಹರಿದಿಲ್ಲ. ನಾಳೆ ಕನ್ನಡ ನೆಲ, ಜಲ ವಿಚಾರವಾಗಿ ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕನ್ನಡದ ಪರ ಅವರ ಕಾಳಜಿ ಮೆಚ್ಚುವಂತದ್ದು ಎಂದ ರಾಮಲಿಂಗಾ ರೆಡ್ಡಡಿ ಬಸ್ ಇರುತ್ತದಾ ಎಂಬ ಪ್ರಶ್ನೆಗೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

ನಾಳೆ ಬಂದ್ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸಾರಿಗೆ ನೌಕರರ ಒಕ್ಕೂಟಗಳು ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡಿದ್ದಾರೋ ಗೊತ್ತಿಲ್ಲ. ಅವರು ಬಂದ್ ಗೆ ಬೆಂಬಲ ಕೊಡುತ್ತೇವೆ ಎಂದರೆ ಬಸ್ ಇರಲ್ಲ, ಬೆಂಬಲ ಇಲ್ಲ ಅಂದರೆ ಬಸ್ ಇರುತ್ತದೆ ಎಂದು ಹೇಳಿಕೆ ನೀಡಿ ಮತ್ತಷ್ಟು ಗೊಂದಲ ಮೂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments