Webdunia - Bharat's app for daily news and videos

Install App

Karnataka Bandh: ಮಾರ್ಚ್ 22 ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ ಇಲ್ಲಿದೆ ವಿವರ

Krishnaveni K
ಮಂಗಳವಾರ, 18 ಮಾರ್ಚ್ 2025 (16:42 IST)
Photo Credit: X
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಈ ದಿನ ಏನಿರುತ್ತೆ, ಏನಿರಲ್ಲ ಇಲ್ಲಿದೆ ವಿವರ.

ಕರ್ನಾಟಕದಲ್ಲಿ ಎಂಇಎಸ್ ನಿಷೇಧ ಮಾಡಬೇಕು, ಮರಾಠಿಗರ ದಬ್ಬಾಳಿಕೆ ನಿಲ್ಲಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಬಂದ್ ಗೆ ಕರೆ ನೀಡಿವೆ.

ಈ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ಜಾರಿಯಲ್ಲಿರಲಿದೆ. ಬೆಳಿಗ್ಗೆ 10.30 ರಿಂದ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆಯಿರುತ್ತದೆ. ಬೆಳಗಾವಿಯಿಂದ ಎಂಇಎಸ್ ಒದ್ದು ಓಡಿಸಬೇಕು ಎಂದರೆ ಕರ್ನಾಟಕ ಬಂದ್ ಗೆ ಬೆಂಬಲ ನೀಡಿ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

ಈ ದಿನ ಬಸ್ ಓಡಿಸಬಾರದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಗೆ ಮನವಿ ಮಾಡಿದ್ದೇವೆ. ಇನ್ನೊಮ್ಮೆ ಮನವಿ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಅಂದು ಖಾಸಗಿ ವಾಹನವನ್ನೂ ಬಳಸದಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಇನ್ನು ಆಟೋ ಚಾಲಕರೂ ಬೆಂಬಲ ನೀಡುವ ನಿರೀಕ್ಷೆಯಿದ್ದು ಅಂದು ಆಟೋ ಓಡಾಟವೂ ಇರಲ್ಲ. ಇನ್ನು ಕನ್ನಡ ಸಿನಿಮಾ ರಂಗವೂ ಬೆಂಬಲ ನೀಡಲಿದ್ದು, ಚಿತ್ರೀಕರಣ, ಸಿನಿಮಾ ಪ್ರದರ್ಶನ ರದ್ದಾಗಲಿದೆ. ಬಸ್ ಸಂಚಾರ ಮತ್ತು ಹೋಟೆಲ್ ತೆರೆಯುವ ಬಗ್ಗೆ ಇನ್ನಷ್ಟೇ ಅಧಿಕೃತ ಪ್ರಕಟಣೆ ಹೊರಬರಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments