Webdunia - Bharat's app for daily news and videos

Install App

ಇಂದು ದೆಹಲಿಯಲ್ಲಿ ನೂತನ ಕರ್ನಾಟಕ ಭವನ ಉದ್ಘಾಟನೆ: ನಿರ್ಮಾಣಕ್ಕೆ ಕೋಟಿ ಕೋಟಿ ಖರ್ಚು

Krishnaveni K
ಬುಧವಾರ, 2 ಏಪ್ರಿಲ್ 2025 (10:36 IST)
Photo Credit: X
ನವದೆಹಲಿ: ಇಂದು ದೆಹಲಿಯಲ್ಲಿ ನೂತನ ಕರ್ನಾಟಕ ಭವನ ಕಟ್ಟಡ ಉದ್ಘಾಟನೆಯಾಗಲಿದೆ. ಈ ಕಟ್ಟಡ ನಿರ್ಮಾಣಕ್ಕೆ ಕೋಟಿ ಕೋಟಿ ಖರ್ಚಾಗಿದೆ. ವಿವರ ಇಲ್ಲಿದೆ ನೋಡಿ.

ದೆಹಲಿಯಲ್ಲಿ ಕರ್ನಾಟಕ ಭವನ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇಂದು ಸಂಜೆ 6.30 ಕ್ಕೆ ಈ ಕಟ್ಟಡ ಲೋಕಾರ್ಪಣೆಯಾಗಲಿದೆ. ಸಿಎಂ ಸಿದ್ದರಾಮಯ್ಯ ಭವನ ಉದ್ಘಾಟಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗಲಿದ್ದಾರೆ. ಇನ್ನು ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ವಿ ಸೋಮಣ್ಣಗೂ ಆಹ್ವಾನ ನೀಡಲಾಗಿದೆ.

ಕರ್ನಾಟಕ ಭವನದ ವಿಶೇಷತೆ
ದೆಹಲಿಯಲ್ಲಿ ಭವ್ಯ ಕರ್ನಾಟಕ ಭವನ ಸುಮಾರು 3,532 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದೆ. ಈ ಭವನವು ಒಟ್ಟು 9 ಅಂತಸ್ತುಗಳನ್ನು ಹೊಂದಿದೆ. ಇದರಲ್ಲಿ ಒಟ್ಟು 52 ಕೊಠಡಿಗಳಿದ್ದು 2 ವಿವಿಐಪಿ ಸೂಟ್ ರೂಂ, 32 ಸೂಟ್ ರೂಂ, 18 ಸಿಂಗಲ್ ರೂಂಗಳನ್ನು ಹೊಂದಿದೆ. 2018 ರಲ್ಲಿ ಯೋಜನೆ ಆರಂಭಗೊಂಡಿತ್ತು. ಮೊದಲು 81 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಯೋಜನೆ ಹಾಕಲಾಗಿತ್ತು. ಅಂತಿಮವಾಗಿ ಈಗ 132 ಕೋಟಿ ರೂ. ವೆಚ್ಚ ತಗುಲಿದೆ.

ದೆಹಲಿಗೆ ಭೇಟಿ ನೀಡುವ ರಾಜಕಾರಣಿಗಳು, ಸರ್ಕಾರೀ ಅಧಿಕಾರಿಗಳು, ಗಣ್ಯರು, ಸಾರ್ವಜನಿಕರಿಗೆ ಇಲ್ಲಿ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ. ಕರ್ನಾಟಕ ಸರ್ಕಾರದಿಂದ ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಆಯೋಜಿಸಲು ವ್ಯವಸ್ಥೆ ಮಾಡಲಾಗಿದೆ. ಇದನ್ನು ಕರ್ನಾಟಕದ ಪರಂಪರೆ, ಸಂಸ್ಕೃತಿಗೆ ಅನುಗುಣವಾಗಿಯೇ ನಿರ್ಮಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments