Webdunia - Bharat's app for daily news and videos

Install App

ಕರ್ನಾಟಕದಲ್ಲಿ ಉಪಚುನಾವಣೆ ಗದ್ದಲ: ಅಭ್ಯರ್ಥಿಗಳ ಫ್ಯಾಮಿಲಿ ವೋಟಿಂಗ್

Krishnaveni K
ಬುಧವಾರ, 13 ನವೆಂಬರ್ 2024 (09:28 IST)
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಇಂದು ಉಪಚುನಾವಣೆ ನಡೆಯುತ್ತಿದ್ದು, ಬೆಳ್ಳಂ ಬೆಳಿಗ್ಗೆಯೇ ಅಭ್ಯರ್ಥಿಗಳ ಕುಟುಂಬಸ್ಥರು ಮತ ಚಲಾಯಿಸಿದ್ದಾರೆ.

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಅವರ ಸಹೋದರ ಸಿಪಿ ರಾಜೇಶ್ ಚಕ್ಕೆರೆ ಮತಗಟ್ಟೆಯಲ್ಲಿ ಬೆಳಿಗ್ಗೆಯೇ ಬಂದು ಮತ ಚಲಾಯಿಸಿ ಹೋಗಿದ್ದಾರೆ. ಇನ್ನು ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ, ಪತಿ, ಸಂಸದ ಇ ತುಕರಾಂ ಜೊತೆ ಬಂದು ಮತ ಚಲಾಯಿಸಿ ಹೋಗಿದ್ದಾರೆ.

ಬಳಿಕ ಮಾತನಾಡಿದ ಇ ತುಕರಾಂ, ವೋಟಿಂಗ್ ಮಾಡಿದ್ದು ಖುಷಿಯಾಗಿದೆ. ಸಂವಿಧಾನದ ಆಶಯದಂತೆ ಇಂದು ಎಲ್ಲರೂ ಮತದಾನ ಮಾಡುತ್ತಿದ್ದಾರೆ. ಇದು ನನಗೆ ಆರನೇ ಚುನಾವಣೆ. ನಾನು ನಾಲ್ಕು ಬಾರಿ ಗೆದ್ದಿದ್ದೆ. ಈಗ ನನ್ನ ಧರ್ಮಪತ್ನಿ ಚುನಾವಣೆ ಸ್ಪರ್ಧಿಸುತ್ತಿದ್ದಾರೆ. ಅವರನ್ನೂ ಗೆಲ್ಲಿಸುತ್ತಾರೆ ಎಂಬ ನಂಬಿಕೆಯಿದೆ ಎಂದಿದ್ದಾರೆ.

ಸಾರ್ವರ್ತಿಕ ಚುನಾವಣೆಗೆ ಹೋಲಿಸಿದರೆ ಈ ಉಪಚುನಾವಣೆಯಲ್ಲಿ ಬೆಳಿಗ್ಗೆ ಇಂದು ಚಳಿಯ ಪ್ರಭಾವಕ್ಕೋ ಏನೋ ಜನ ಕೊಂಚ ಕಡಿಮೆಯಾಗಿದ್ದರೂ ನಿಧಾನವಾಗಿ ಜನ ಮತಗಟ್ಟೆಯತ್ತ ಬರುತ್ತಿದ್ದಾರೆ. ಈ ಬಾರಿಯ ಚುನಾವಣೆ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ-ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments