ಕರ್ನಾಟಕಕ್ಕೆ ಯಾರೆಲ್ಲಾ ನೂತನ ಸಚಿವರು, ಇಂದು ರಾಹುಲ್ ಗಾಂಧಿ ಫೈನಲ್ ಕಾಲ್

ಕೃಷ್ಣವೇಣಿ ಕೆ
ಬುಧವಾರ, 29 ಜುಲೈ 2026 (10:08 IST)
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಚಾರ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಇಂದೂ ಕೂಡಾ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ರಾಹುಲ್ ಗಾಂಧಿ ಪಟ್ಟಿ ಫೈನಲ್ ಮಾಡಲಿದ್ದಾರೆ.

ಇತ್ತೀಚೆಗೆ ಜೆನ್ ಜಿ ಪ್ರತಿಭಟನೆ ಕಾಂಗ್ರೆಸ್ ನಾಯಕರನ್ನೂ ಜಾಗೃತಗೊಳಿಸಿದೆ. ಹೀಗಾಗಿ ಈಗ ಸಚಿವರ ಪಟ್ಟಿಯಲ್ಲಿ ಯುವ ನಾಯಕರಿಗೇ ಹೆಚ್ಚು ಪ್ರಾತಿನಿಧ್ಯ ನೀಡಲಾಗಿದೆ ಎನ್ನಲಾಗಿದೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿ ಅಂತಿಮ ಸುತ್ತಿನ ಸಭೆ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ದೆಹಲಿಯಲ್ಲಿದ್ದು, ಹೈಕಮಾಂಡ್ ನಾಯಕರೊಂದಿಗೆ ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ.

ಮುಂಬರುವ ಶಾಸನಸಭೆಯ ಮುಂಗಾರು ಅಧಿವೇಶನಕ್ಕೂ ಮುನ್ನ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ಶೀಘ್ರ ನಿರ್ಧಾರ ಕೈಗೊಳ್ಳುತ್ತಿದೆ. ಹೈಕಮಾಂಡ್ ಸಭೆಯಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಪಟ್ಟಿಗೆ ಅಂತಿಮ ಒಪ್ಪಿಗೆ ನೀಡಿದ ತಕ್ಷಣ, ಪಟ್ಟಿಯನ್ನು ರಾಜಭವನಕ್ಕೆ ರವಾನಿಸಲಾಗುತ್ತದೆ. ತದನಂತರ ರಾಜ್ಯಪಾಲರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಹೋರಾಟ ಬಿಜೆಪಿ ರಾಜ್ಯಕ್ಕೆ ಮಾತ್ರನಾ, ಪಂಜಾಬ್ ನಲ್ಲಿ ಯಾಕಿಲ್ಲ ಎಂದು ಯುವತಿ ಕೇಳಿದ್ದಕ್ಕೆ ಸಿಜೆಪಿ ಸೌರವ್ ದಾಸ್ ತಬ್ಬಿಬ್ಬು Video

ಪ್ರಲ್ಹಾದ್ ಜೋಶಿ ನಿಜವಾಗಿಯೂ ರೇಪಿಸ್ಟ್ ಗಳನ್ನು ಸಮರ್ಥಿಸಿದ್ರಾ: ಪ್ರಿಯಾಂಕಾ ಗಾಂಧಿ ಆರೋಪದ ನಿಜಾಂಶವೇನು

ರೇಪಿಸ್ಟ್ ಗಳನ್ನು ರಸ್ತೆಯಲ್ಲೇ ಎಳೆದು ತಂದು ಚೆನ್ನಾಗಿ ಗೂಸಾ ಕೊಟ್ಟ ಪೊಲೀಸರು Video

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಸಂಜೆ ಭಾರೀ ಮಳೆ ಸಂಭವ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ಮುಂದಿನ ಸುದ್ದಿ
Show comments