Webdunia - Bharat's app for daily news and videos

Install App

ಮೈಕ್ರೋ ಫೈನಾನ್ಸ್ ಗೆ ವಿಧಿಸಿರುವ ಹೊಸ ನಿಯಮಗಳು ಏನು, ಎಷ್ಟು ಶಿಕ್ಷೆ ಇಲ್ಲಿದೆ ವಿವರ

Krishnaveni K
ಮಂಗಳವಾರ, 4 ಫೆಬ್ರವರಿ 2025 (08:56 IST)
ಬೆಂಗಳೂರು: ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದ್ದು ರಾಜ್ಯಪಾಲರ ಅಂಕಿತದ ಬಳಿಕ ಇಂದಿನಿಂದಲೇ ಜಾರಿಯಾಗುವ ಸಾಧ್ಯತೆಯಿದೆ. ಮೈಕ್ರೋಫೈನಾನ್ಸ್ ಗೆ ವಿಧಿಸಿರುವ ನಿಯಮಗಳು ಏನು ಇಲ್ಲಿದೆ ವಿವರ.

ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಹಾವಳಿಯಿಂದ ಸಾಲ ಪಡೆದವರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಸರ್ಕಾರ ಇಂತಹ ಸಂಸ್ಥೆಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ತೀರ್ಮಾನಿಸಿದೆ.

ಮೈಕ್ರೋಫೈನಾನ್ಸ್ ವಿರುದ್ಧ ಸರ್ಕಾರ ಕಠಿಣ ನಿಯಮಗಳನ್ನು ರೂಪಿಸಿದ್ದು ಸುಗ್ರೀವಾಜ್ಞೆ ರೂಪಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ರಾಜ್ಯಪಾಲರ ಅಂಕಿತ ಬಿದ್ದ ಕೂಡಲೇ ಸುಗ್ರೀವಾಜ್ಞೆ ಜಾರಿಗೆ ಬರಲಿದೆ.

ಸುಗ್ರೀವಾಜ್ಞೆಯಲ್ಲಿ ಏನಿದೆ?
ಇನ್ನು ಮುಂದೆ ಹಣ ವಾಪಸ್ ಮಾಡುವಂತೆ ಕಿರುಕುಳ ನೀಡಿದ್ರೆ 10 ವರ್ಷ ಜೈಲು ಮತ್ತು 5 ಲಕ್ಷ ರೂ. ದಂಡ ವಿಧಿಸಬಹುದಾಗಿದೆ.
ಸಾಲ ಕೊಟ್ಟಿದ್ದಕ್ಕೆ 30 ದಿನದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು.
ನೋಂದಣಿ ಮಾಡಿಸಿಕೊಳ್ಳದೇ ಸಾಲ ಕೊಟ್ಟರೆ ಅದು ಮನ್ನಾ ಆಗಲಿದೆ.
ನೊಂದಾಯಿತ ಹಣಕಾಸು ಸಂಸ್ಥೆ ವಿರುದ್ಧ ಆರೋಪ ಸಾಬೀತಾದರೆ ಆ ಸಂಸ್ಥೆಯ ಪರವಾನಗಿಯೇ ರದ್ದಾಗಲಿದೆ.
ಕಿರುಕುಳ ಕೊಟ್ಟದಲ್ಲಿ ಸಾಲ ಪಡೆದವರು ಪೊಲೀಸರಿಗೆ ದೂರು ನೀಡಬಹುದಾಗಿದೆ
ಡಿವೈಎಸ್ ಪಿ ದರ್ಜೆಗಿಂತ ಕಡಿಮೆಯಿಲ್ಲದ ಪೊಲೀಸ್ ಅಧಿಕಾರಿ ಓಂಬಡ್ಸ್ ಮನ್ ಆಗಿ ನೇಮಕ ಮಾಡಬೇಕು.
ಸಾಲಕ್ಕೆ ಸಂಬಂಧಿಸಿದಂತೆ ಕರಾರು ಪತ್ರ ಮಾಡಿಕೊಳ್ಳಬೇಕು.
ಸಾಲಗಾರರಿಂದ ಯಾವುದೇ ಅಡಮಾನ, ಗಿರವಿ ಭದ್ರತೆ ಇರಿಸಿಕೊಳ್ಳುವಂತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments