Webdunia - Bharat's app for daily news and videos

Install App

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Krishnaveni K
ಶನಿವಾರ, 19 ಏಪ್ರಿಲ್ 2025 (10:49 IST)
ಬೆಂಗಳೂರು: ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿಗೆ ತರುವ ನಿಟ್ಟಿನಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಭಾರೀ ವಿರೋಧ ಕಂಡುಬಂದಿತ್ತು. ಈ ಹಿನ್ನಲೆಯಲ್ಲಿ ಇದರ ಬಗ್ಗೆ ಎಲ್ಲಾ ಸಚಿವರ ಅಭಿಪ್ರಾಯವನ್ನು ನೇರವಾಗಿ ರಾಹುಲ್ ಗಾಂಧಿಗೆ ಸಲ್ಲಿಕೆ ಮಾಡಲು ರಾಜ್ಯ ನಾಯಕರು ಸಿದ್ಧತೆ ನಡೆಸಿದ್ದಾರೆ.

ಜಾತಿಗಣತಿ ಮಾಡಬೇಕು ಎಂಬುದು ರಾಹುಲ್ ಗಾಂಧಿ ಕನಸು. ಈಗಾಗಲೇ ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಜಾತಿಗಣತಿ ವರದಿ ಜಾರಿಗೆ ತರಲಾಗಿದೆ. ಇದೀಗ ಕರ್ನಾಟಕದಲ್ಲೂ ಜಾತಿಗಣತಿ  ವರದಿ ಜಾರಿಗೆ ತರಲು ಸಿದ್ಧತೆ ನಡೆದಿತ್ತು.

ಆದರೆ ಈಗಾಗಲೇ ಸಿದ್ಧವಾಗಿರುವ ವರದಿ ಬಗ್ಗೆ ಸಚಿವರಲ್ಲೇ ಅಸಮಾಧಾನಗಳಿವೆ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಸಚಿವರಿಂದ ತೀವ್ರ ಆಕ್ಷೇಪ ಕಂಡುಬಂದಿತ್ತು. ತಮ್ಮ ತಮ್ಮ ಸಮುದಾಯದ ಪರ ಎಲ್ಲಾ ಸಚಿವರು ಬ್ಯಾಟ್ ಬೀಸಿದ್ದರು.

ಹೀಗಾಗಿ ಈಗ ಸಿಎಂ ಸಿದ್ದರಾಮಯ್ಯ ಎಲ್ಲಾ ನಾಯಕರಿಗೆ ಲಿಖಿತ ರೂಪದಲ್ಲಿ ತಮ್ಮ ಅಭಿಪ್ರಾಯ ತಿಳಿಸುವಂತೆ ಸೂಚನೆ ನೀಡಿದ್ದಾರೆ. ಇದನ್ನು ರಾಹುಲ್ ಗಾಂಧಿಗೆ ರವಾನಿಸುವ ಸಾಧ್ಯತೆಯಿದೆ. ಬಳಿಕ ಅವರ ಅಭಿಪ್ರಾಯ ಪಡೆದು ಮುಂದಿನ ಹೆಜ್ಜೆಯಿಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments