Webdunia - Bharat's app for daily news and videos

Install App

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Krishnaveni K
ಶನಿವಾರ, 19 ಏಪ್ರಿಲ್ 2025 (10:04 IST)
ನವದೆಹಲಿ: ಕರ್ನಾಟಕದಲ್ಲಿ ಈಗ ಜಾತಿಗಣತಿ ವರದಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದೇ ಸಂದರ್ಭದಲ್ಲಿ ದೇಶದ ಪ್ರಮುಖ ನಾಯಕರ ಜಾತಿ ಯಾವುದು ಮತ್ತು ಯಾವ ಸಮುದಾಯಕ್ಕೆ ಸೇರಿದವರು ಎಂಬ ವಿವರ ನೋಡೋಣ.

ರಾಷ್ಟ್ರಪತಿ ದ್ರೌಪದಿ ಮುರ್ಮು: ಆದಿವಾಸಿ ಬುಡಕಟ್ಟು ಜನಾಂಗಕ್ಕೆ ಸೇರಿದ ದ್ರೌಪದಿ ಮುರ್ಮು ದೇಶದ ಉನ್ನತ ಸ್ಥಾನಕ್ಕೇರಿದ ಹೆಮ್ಮೆಯ ಮಹಿಳೆ.

ಪ್ರಧಾನಿ ನರೇಂದ್ರ ಮೋದಿ: ಗುಜರಾತ್ ನ ವಡ್ನಾನಗರ್ ನಲ್ಲಿ ಜನಿಸಿದ್ದ ಮೋದಿ ಹಿಂದೂ ಒಬಿಸಿ ಸಮುದಾಯಕ್ಕೆ ಸೇರಿದವರು. 2000 ರಲ್ಲಿ ಮೋದಿಯವರ ಜಾತಿ ವರ್ಗವನ್ನೂ ಹಿಂದುಳಿದ ವರ್ಗಕ್ಕೆ ಸೇರ್ಪಡೆಗೊಳಿಸಿತ್ತು.

ಅಮಿತ್ ಶಾ: ಗುಜರಾತ್ ನ ಹಿಂದೂ ಧರ್ಮದ ಬನಿಯಾ ಸಮುದಾಯದವರಾಗಿದ್ದಾರೆ. ಅಮಿತ್ ಶಾ ಪೂರ್ವಜರು ಗುಜರಾತ್ ನವರೇ. ಆದರೆ ಅವರು ಹುಟ್ಟಿದ್ದು ಮುಂಬೈನಲ್ಲಿ.

ನಿರ್ಮಲಾ ಸೀತಾರಾಮನ್: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮಿಳುನಾಡು ಮಧುರೈ ಮೂಲದ ಅಯ್ಯಂಗಾರ್ ಸಮುದಾಯದವರು.

ಮಲ್ಲಿಕಾರ್ಜುನ ಖರ್ಗೆ: ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ದಲಿತ ಸಮುದಾಯಕ್ಕೆ ಸೇರಿದವರು.

ರಾಹುಲ್ ಗಾಂಧಿ: ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ತಮ್ಮ ಜಾತಿ ಗುಟ್ಟು ಇದುವರೆಗೆ ಸ್ಪಷ್ಟವಾಗಿ ಬಿಟ್ಟುಕೊಟ್ಟಿಲ್ಲ. ಹಿಂದೊಮ್ಮೆ ತಾನು ಕಾಶ್ಮೀರಿ ಕೌಲ್ ಬ್ರಾಹ್ಮಣ ಎಂದಿದ್ದರು. ಮಗದೊಮ್ಮೆ ನನಗೆ ಯಾವುದೇ ಜಾತಿಯಿಲ್ಲ ಎಂದಿದ್ದರು.

ಸಿದ್ದರಾಮಯ್ಯ: ಸಿದ್ದರಾಮಯ್ಯನವರು ಕುರುಬ ಗೌಡ ಜನಾಂಗಕ್ಕೆ ಸೇರಿದವರು. ಅವರನ್ನು ಕುರುಬರ ನಾಯಕ ಎಂದೇ ಹೇಳಲಾಗುತ್ತದೆ.

ಡಿಕೆ ಶಿವಕುಮಾರ್: ಕರ್ನಾಟಕದ ಪ್ರಮುಖ ಸಮುದಾಯಗಳಲ್ಲಿ ಒಂದಾದ ಒಕ್ಕಲಿಗ ಸಮುದಾಯಕ್ಕೆ ಸೇರಿದವರು.

ಎಚ್ ಡಿ ಕುಮಾರಸ್ವಾಮಿ: ಕೇಂದ್ರ ಸಚಿವರಾಗಿರುವ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕೂಡಾ ಒಕ್ಕಲಿಗ ಸಮುದಾಯಕ್ಕೆ ಸೇರಿದವರು.

ಬಿಎಸ್ ಯಡಿಯೂರಪ್ಪ: ಯಡಿಯೂರಪ್ಪ ಆಂಡ್ ಕುಟುಂಬ ರಾಜ್ಯದ ಮತ್ತೊಂದು ಪ್ರಮುಖ ಸಮುದಾಯವಾದ ಲಿಂಗಾಯತ ಸಮುದಾಯಕ್ಕೆ ಸೇರಿದವರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments