Webdunia - Bharat's app for daily news and videos

Install App

ಅಚ್ಚೇ ದಿನ್ ಬಂದಿರುವುದು ಮೋದಿಯ ಶ್ರೀಮಂತ ಗೆಳೆಯರಿಗೆ ಮಾತ್ರ: ಸಿಎಂ ವಾಗ್ದಾಳಿ

Krishnaveni K
ಶನಿವಾರ, 1 ಮಾರ್ಚ್ 2025 (20:29 IST)
ಬೆಂಗಳೂರು: ಅಚ್ಚೇ ದಿನ್ ಬಂದಿರುವುದು ಮೋದಿಯವರ ಶ್ರೀಮಂತ ಕೋಟ್ಯಾಧಿಪತಿ ಗೆಳೆಯರಿಗೆ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಬೇಕಾಗಿರುವ ತೆರಿಗೆ ಪಾಲನ್ನು ಶೇ.41 ರಿಂದ ಶೇ. 40 ಕ್ಕೆ ಇಳಿಸುವ ಪ್ರಸ್ತಾವನೆ ಬಗ್ಗೆ ಈಗ ಸಿಎಂ ಸಿದ್ದರಾಮಯ್ಯ ನಿರಂತರವಾಗಿ ವಾಗ್ದಾಳಿ ನಡೆಸುತ್ತಲೇ ಬಂದಿದ್ದಾರೆ. ಇದೀಗ ಸಿಎಂ ಅಧಿಕೃತ ಟ್ವೀಟ್ ಖಾತೆಯಿಂದ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅಚ್ಚೇ ದಿನ್ ಪ್ರಧಾನಿ ಮೋದಿಯವರ ಶತ ಕೋಟ್ಯಾಧಿಪತಿ ಗೆಳೆಯರಿಗಷ್ಟೇ ಬಂದಿದೆ. ಈಗ ವಿಕಸಿತ ಭಾರತದ ಕತೆಯೂ ಮರೀಚಿಕೆಯಾಗಿದೆ.  2024-25 ನೇ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ದೇಶದ ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ) ಕಳೆದ ಆರ್ಥಿಕ ವರ್ಷಕ್ಕಿಂತ ಶೇ. 3.3 ರಷ್ಟು ಇಳಿಕೆಯಾಗಿದೆ. ಅಲ್ಲದೆ, ಭಾರತೀಯ ರಿಸರ್ವ್ ಬ್ಯಾಂಕ್ ಅಂದಾಜಿಸಿದ್ದ ಶೇ. 6.8 ಕ್ಕಿಂತಲೂ ಕಡಿಮೆಯಾಗಿದೆ.

ಉತ್ಪಾದನಾ ವಲಯ ಸೇರಿದಂತೆ ಇತರೆ ವಲಯಗಳಲ್ಲಿನ ಬೆಳವಣಿಗೆ ಕುಸಿತವೇ ಇದಕ್ಕೆ ಕಾರಣ. ಮೋದಿ ಆಡಳಿತ ದೇಶದ ಅರ್ಥವ್ಯವಸ್ಥೆಯ ಬೆನ್ನು ಮೂಳೆ ಮುರಿಯುತ್ತಿದೆ’ ಎಂದು ಸಿಎಂ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments