Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ರಾಜ್ಯ ಸರ್ಕಾರವು ಪ್ರೌಢಶಾಲೆಗಳಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಅಕ್ಟೋಬರ್ ನಲ್ಲಿ ಕರ್ನಾಟಕ ದರ್ಶನ ಪ್ರವಾಸವನ್ನು ಆಯೋಜಿಸಿದೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ವತಿಯಿಂದ ಕರ್ನಾಟಕ ದರ್ಶನ ಉಚಿತ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮವನ್ನು 2022-23 ನೇ ಸಾಲಿನಲ್ಲಿ ಎಸ್. ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗದ ವಿದ್ಯಾರ್ಥಿಗಳಿಗೆ ಕರ್ನಾಟಕ ದರ್ಶನ ಪ್ರವಾಸವನ್ನು ಅಕ್ಟೋಬರ್ 2022 ರಲ್ಲಿ ಆಯೋಜಿಸಲಾಗುತ್ತಿದೆ. ಮಕ್ಕಳಲ್ಲಿ ಶೈಕ್ಷಣಿಕ ಜೀವನ ರೂಪಿಸಿಕೊಳ್ಳು ಮಾರ್ಗದರ್ಶನ ಸಿಗುವ ನಿಟ್ಟಿನಲ್ಲಿ ರಾಜ್ಯದ ಶೈಕ್ಷಣಿಕ ಮತ್ತು ಐತಿಹಾಸಿಕ ಸ್ಥಳಗಳಿಗೆ ಭೇಟಿ ಸ್ಥಳ ವೀಕ್ಷಣೆ ಮಾಡಲು ಅವಕಾಶ ಮಾಡಿಕೊಟ್ಟಿರುತ್ತಾರೆ.