Webdunia - Bharat's app for daily news and videos

Install App

ವಯನಾಡು ಸಂತ್ರಸ್ತರ ನೆರವಿಗೆ ನಿಂತ ಕರ್ನಾಟಕ ಸರ್ಕಾರ: 100 ಮನೆ ನಿರ್ಮಾಣದ ಭರವಸೆ ಕೊಟ್ಟ ಸಿಎಂ

Sampriya
ಶನಿವಾರ, 3 ಆಗಸ್ಟ್ 2024 (15:31 IST)
ಬೆಂಗಳೂರು: ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ದುರಂತದ ವೇಳೆ ಕರ್ನಾಟಕ ಸರ್ಕಾರ ಕೇರಳದೊಂದಿಗೆ ಒಗ್ಗಟ್ಟಿನಿಂದ ನಿಂತಿದೆ.  ನಾನು ಸಿಎಂ ಪಿಣರಾಯಿ ವಿಜಯನ್ ಅವರುಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾನೆ. ಇದೀಗ ದುರಂತದಲ್ಲಿ ಮನೆ ಕಳೆದುಕೊಂಡವರಿಗೆ ಕರ್ನಾಟಕ ಸರ್ಕಾರ 100 ಮನೆಗಳನ್ನು ನಿರ್ಮಿಸುವ ಭರವಸೆ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ.


ಕೇರಳದ ವಯನಾಡಿನಲ್ಲಿ ಮಂಗಳವಾರ ಮುಂಜಾನೆ ಕೇರಳದ ವಯನಾಡಿನಲ್ಲಿ ಭೀಕರ ಎರಡು ಭೂಕುಸಿತ ಸಂಭವಿಸಿ, 210 ಮಂದಿ ಸಾವನ್ನಪ್ಪಿದ್ದು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಅಪಾರ ಪ್ರಾಣ ಹಾನಿಯೊಂದಿಗೆ ಮನೆ ಹಾನಿಯಾಗಿದ್ದು, ವಯನಾಡಿನ ಚಿತ್ರಣವೇ ಬದಲಾಗಿದೆ. ಇದೀಗ ವಯನಾಡು ಸಂತ್ರಸ್ತರ ನೆರವಿಗೆ ಸಿನಿಮಾ ತಾರೆಯರು ಕೈಜೋಡಿಸಿದ್ದಾರೆ. ಎನ್‌ಎಸ್‌ಎಸ್‌ ಕೂಡ ಸಂತ್ರಸ್ತರಿಗೆ ತಾವೇ ಸ್ವತಃ ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಅದಲ್ಲದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಭೇಟಿ ವೇಳೆ ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಹೇಳಿದ್ದಾರೆ.

ಇದೀಗ ಇದರ ಬೆನ್ನಲ್ಲೇ ರಾಜ್ಯದ ಕಾಂಗ್ರೆಸ್‌ ಸರ್ಕಾರವು ಸಂತ್ರಸ್ತರಿಗೆ 100 ಮನೆ ನಿರ್ಮಾಣ ಮಾಡಲು ಕೈಜೋಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments