Publish Date: Mon, 27 Feb 2023 (17:35 IST)
Updated Date: Mon, 27 Feb 2023 (17:38 IST)
ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಏರ್ ಪೋರ್ಟ್ ಉದ್ಘಾಟನೆ ಮಾಡಲಾಗಿದ್ದು, ಏರ್ಪೋರ್ಟ್ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ರು. ಕರ್ನಾಟಕ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ. ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ ಒಂದು ಮೈಲಿಗಲ್ಲು ಎಂದು ಹೇಳಿದ್ರು. ಯಡಿಯೂರಪ್ಪನವರ ಪರಿಶ್ರಮದಿಂದ ಏರ್ಪೋರ್ಟ್ ಆಗಿದೆ. ಪ್ರಧಾನಿ ಮೋದಿ ಸರ್ಕಾರದಲ್ಲಿ ವಿಮಾನಯಾನ ಕ್ಷೇತ್ರ ಅಭಿವೃದ್ಧಿ ಆಗ್ತಿದೆ. ಉಡಾನ್ ಯೋಜನೆಯಡಿ ವಿಮಾನ ನಿಲ್ದಾಣಗಳ ನಿರ್ಮಾಣ ಮಾಡಲಾಗಿದೆ. BSY ಪರಿಶ್ರಮಕ್ಕೆ ಸಂದ ಫಲ ಎಂದು ಸಂತಸ ಹಂಚಿಕೊಂಡ್ರು.. ಈ ಏರ್ಪೋರ್ಟ್ನಿಂದ ಮಲೆನಾಡಿನ ಆರ್ಥಿಕ ಮತ್ತು ಪ್ರವಾಸೋದ್ಯಮಕ್ಕೆ ಸಹಾಯವಾಗಲಿದೆ. ಯಡಿಯೂರಪ್ಪ ಹುಟ್ಟುಹಬ್ಬದ ದಿನವೇ ಏರ್ಪೋರ್ಟ್ ಉದ್ಘಾಟನೆಯಾಗುತ್ತಿದ್ದು, ಇದು ಅತ್ಯಂತ ವಿಶೇಷ ಹಾಗೂ ದೈವೇಚ್ಛೆ ಎಂದು ಬೊಮ್ಮಾಯಿ ಹೇಳಿದ್ರು.