Publish Date: Sat, 30 Oct 2021 (20:54 IST)
Updated Date: Sat, 30 Oct 2021 (21:00 IST)
ಮಂಗಳೂರು: ಸದ್ಯಕ್ಕೆ ಕರ್ನಾಟಕ-ಕೇರಳ ಅಂತರಾಜ್ಯ ಬಸ್ ಸಂಚಾರ ಪುನರಾರಂಭವಾಗುವುದು ಅನುಮಾನವಾಗಿದ್ದು, ಒಂದು ವಾರ ಯಥಾಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.
ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ನ.1ರಿಂದ ಬಸ್ ಸಂಚಾರ ಪುನರಾರಂಭವಾಗುವ ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿವೆ. ಆದರೆ, ಒಂದು ವಾರದ ಕಾಲ ಅಂತರಾಜ್ಯ ಬಸ್ ಸಂಚಾರ ಪುನರಾರಂಭವಾಗದು ಎಂದು ದ.ಕ ಅಧಿಕೃತ ಹೇಳಿದೆ. ಈ ವಿಚಾರವಾಗಿ ಕೇರಳ ಕೆಎಸ್ಆರ್ಟಿಸಿಯ ಅಧಿಕಾರಿಗಳು ತಿಳಿಸಿದ್ದು, “ಕರ್ನಾಟಕ ಬಸ್ಗಳು ರಾಜ್ಯಕ್ಕೆ ಪ್ರವೇಶಿಸಲು, ನಮ್ಮ ಬಸ್ಗಳನ್ನು ಕರ್ನಾಟಕಕ್ಕೆ ಬಿಡಲು ಸಾಧ್ಯವಿಲ್ಲ. ಕರ್ನಾಟಕ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆ ಬಸ್ಗಳು ಗಡಿ ದಾಟಲು ಸಾಧ್ಯವಾಗುತ್ತಿಲ್ಲ. ಕರ್ನಾಟಕ ಸರ್ಕಾರವು ತಕ್ಷಣವೇ ನಮ್ಮಲ್ಲಿಂದ ಬಸ್ ಅನ್ನು ಪ್ರಾರಂಭಿಸಬೇಕು” ಎಂದು ಹೇಳಿದರು.”ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.5ಕ್ಕಿಂತ ಕೆಳಗೆ ಬಾರದೆ ಇದ್ದಲ್ಲಿ ಅಂತರಾಜ್ಯ ಬಸ್ ಪುನರಾರಂಭಿಸಲು ಸಾಧ್ಯವಿಲ್ಲ. ಈ ಬಗ್ಗೆ ಇನ್ನೂ ಒಂದು ವಾರದ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಿಲ್ಲ” ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿಇನ್.ಕರ್ನಾಟಕ-ಕೇರಳ ಅಂತರಾಜ್ಯ ಬಸ್ ಸಂಚಾರ ನಿರ್ಬಂಧದ ಮಧ್ಯೆಯೇ ಎ. 25ರಿಂದ ಕರ್ನಾಟಕದಲ್ಲಿ ಪ್ರಾಥಮಿಕ ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳು ಪ್ರಾರಂಭವಾಗಿವೆ.ದ.ಕ ಜಿಲ್ಲೆಯ ವಿವಿಧ ಕಾಸರಗೋಡು ಭಾಗದಿಂದ ಸುಮಾರು 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಕಡ್ಡಾಯವಾಗಿ ತರಗತಿಗೆ ಹಾಜರಾಗಬೇಕೆಂದಿಲ್ಲ. ಆನ್ಲೈನ್ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲಾಗಿದೆ. ಆದರೆ, ಒಂದೂವರೆ ವರ್ಷದಿಂದ ಮನೆಯಲ್ಲಿಯೇ ಉಳಿದಿರುವ ವಿದ್ಯಾರ್ಥಿಗಳು ಅನೇಕ ಮಂದಿ ಈಗ ತರಗತಿಗೆ ಹಾಜರಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
geetha
Publish Date: Sat, 30 Oct 2021 (20:54 IST)
Updated Date: Sat, 30 Oct 2021 (21:00 IST)