Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

Krishnaveni K
ಗುರುವಾರ, 14 ಆಗಸ್ಟ್ 2025 (08:32 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆಯಾಗುತ್ತಿದೆ. ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಕಾರಣವೇನು, ಎಲ್ಲಿಯವರೆಗೆ ಮಳೆಯಿರಲಿದೆ ಇಲ್ಲಿದೆ ಹವಾಮಾನ ವರದಿ.

ಇಷ್ಟು ದಿನ ಕೇವಲ ಕರಾವಳಿ ಭಾಗದಲ್ಲಿ ಮಾತ್ರ ಮಳೆಯ ಅಬ್ಬರವಿತ್ತು. ಆದರೆ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರು, ಒಳನಾಡಿನಲ್ಲೂ ತೀವ್ರ ಮಳೆಯಾಗುತ್ತಿದೆ. ಆದರೆ ಕರಾವಳಿಯಲ್ಲಿ ಈ ವಾರ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಿತ್ತು.

ಆದರೆ ಉಳಿದೆಡೆ ನಿರಂತರ ಮಳೆಯಾಗುತ್ತಿದೆ. ಆಗಸ್ಟ್ 13 ರವರೆಗೆ ಉತ್ತಮ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಲೇಟೆಸ್ಟ್ ಹವಾಮಾನ ವರದಿ ಪ್ರಕಾರ ಇಂದಿನಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ಬೆಂಗಳೂರು ಮಾತ್ರವಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಯಾದಗಿರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಪ್ಪಳ, ರಾಯಚೂರು, ಚಿತ್ರದುರ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಒಂದು ವಾರ ಕಾಲ ಮಳೆಯ ಅಬ್ಬರವಿರಲಿದೆ ಎಂದು ವರದಿಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ ಮಂಡಿಸುತ್ತಿದ್ದಂತೆ ಸಂಸತ್ ನಲ್ಲಿ ಗದ್ದಲವೆಬ್ಬಿಸಿದ ವಿಪಕ್ಷಗಳು Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎಲ್ಲೆಲ್ಲೊ ಕೈ ಹಾಕ್ತೀಯಾ... ಲೈಂಗಿಕ ಕಿರುಕುಳ ಕೊಡುತ್ತಿದ್ದ ಶಿಕ್ಷಕನ ಮೇಲೆ ವಿದ್ಯಾರ್ಥಿಯ ಸಹನೆ ಕಟ್ಟೆಯೊಡೆದಾಗ ಏನಾಯ್ತು Video

ಮೋದಿ ಜೀ ಫೋನ್ ಮಾಡಿದ್ದಾರೆ ಎಂದು ಪ್ರಾಂಕ್ ಮಾಡಿದ್ರೂ ನಿಜ ಎಂದು ನಂಬಿದ ಅಜ್ಜಿ: ಮುಗ್ಧ ಮಾತು ಕೇಳಿ Video

ಮೋದಿ ಮಾಸ್ಟರ್ ಸ್ಟ್ರೋಕ್... ಪರೀಕ್ಷೆ ವ್ಯವಸ್ಥೆ ಸುಧಾರಣೆಗೆ ಟಾಸ್ಕ್ ಫೋರ್ಸ್ ನಲ್ಲಿರುವವರು ಎಂಥಾ ದಿಗ್ಗಜರು ಗೊತ್ತಾ

ಮುಂದಿನ ಸುದ್ದಿ
Show comments