Webdunia - Bharat's app for daily news and videos

Install App

ರಾಜ್ಯಸಭೆ ಮತದಾನ ಮುಕ್ತಾಯ: ಇಬ್ಬರು ಬಿಜೆಪಿಗರಿಂದ ಪಕ್ಷಕ್ಕೇ ಏಟು

Krishnaveni K
ಮಂಗಳವಾರ, 27 ಫೆಬ್ರವರಿ 2024 (17:26 IST)
ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯಸಭೆಗೆ ನಡೆದ ಚುನಾವಣಾ ಪ್ರಕ್ರಿಯೆ ಅಂತ್ಯವಾಗಿದ್ದು, ಇಬ್ಬರು ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ್ದಾರೆ.

ಇಂದು ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಮತದಾನ ನಡೆಸಿದ್ದಾರೆ. ಈ ಪೈಕಿ ಇಬ್ಬರು ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿದ್ದಾರೆ.  ಒಟ್ಟು 223  ಶಾಸಕರ ಪೈಕಿ 222 ಶಾಸಕರು ಮತದಾನ ಮಾಡಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಗೈರಾಗಿದ್ದರು.

ಉಳಿದಂತೆ ಕಾಂಗ್ರೆಸ್ ನ 135 ಶಾಸಕರು, ಬಿಜೆಪಿಯ 65 ಮತ್ತು ಜೆಡಿಎಸ್ ನ 19 ಮತ್ತು ಮೂವರು ಪಕ್ಷೇತರ ಶಾಸಕರು ಮತದಾನ ಮಾಡಿದ್ದಾರೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಗೆ ಮತದಾನ ಮಾಡಿದ್ದಾರೆ. ಮತ್ತೊಬ್ಬ ಶಾಸಕ ಶಿವರಾಮ್ ಹೆಬ್ಬಾರ್ ಚುನಾವಣೆ ಮಾಡದೇ ಇರುವುದು ಬಿಜೆಪಿಗೆ ಮುಳುವಾಗಿದೆ.

ಸದ್ಯದ ಲೆಕ್ಕಾಚಾರ ಪ್ರಕಾರ ಕಾಂಗ್ರೆಸ್ ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ಗೆಲ್ಲುವುದು ನಿಶ್ಚಿತವಾಗಿದೆ. ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಸೋಲುವುದು ಖಚಿತವಾಗಿದೆ. ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments