Webdunia - Bharat's app for daily news and videos

Install App

Karnataka Weather: ದಕ್ಷಿಣ ಕನ್ನಡದವರು ಇಂದಿನ ಹವಾಮಾನ ವರದಿಯನ್ನು ವಿಶೇಷವಾಗಿ ಗಮನಿಸಿ

Krishnaveni K
ಭಾನುವಾರ, 13 ಏಪ್ರಿಲ್ 2025 (08:58 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯವರು ಇಂದಿನ ಹವಾಮಾನವನ್ನು ವೀಕ್ಷಿಸಬೇಕು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ನಿನ್ನೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ತಕ್ಕಮಟ್ಟಿಗೆ ಮಳೆಯಾಗಿತ್ತು. ಈ ಜಿಲ್ಲೆಗೆ ಇಂದೂ ಮಳೆಯ ಸೂಚನೆಯಿದೆ. ಇಂದೂ ಕೂಡಾ ಸಣ್ಣ ಮಟ್ಟಿಗೆ ಮಳೆಯಾಗಲಿದೆ ಎಂದು ವರದಿಯಾಗಿದೆ.

ಆದರೆ ಪಕ್ಕದ ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿಲ್ಲ. ಕೊಡಗಿನಲ್ಲೂ ನಿನ್ನೆಯವರೆಗೆ ಮಳೆಯಾಗಿತ್ತು. ಆದರೆ ಇಂದು ವರುಣ ತಕ್ಕಮಟ್ಟಿಗೆ ಬಿಡುವು ನೀಡಲಿದ್ದಾನೆ. ಮಂಡ್ಯದಲ್ಲಿ ಇಂದು ಸಣ್ಣ ಹನಿ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲಿನ ತಾಪ ಮುಂದುವರಿಯಲಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ವಿಪರೀತ ಸೆಖೆಯ ವಾತಾವರಣವಿದೆ. ಇಂದೂ ಅದು ಮುಂದುವರಿಯಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments