Webdunia - Bharat's app for daily news and videos

Install App

ಕರ್ನಾಟಕ ಹವಾಮಾನ: ಇಂದಿನಿಂದ ಈ ದಿನದವರೆಗೆ ಭಾರೀ ಚಳಿ, ಈ ಟಿಪ್ಸ್ ಪಾಲಿಸಿ

Krishnaveni K
ಶುಕ್ರವಾರ, 10 ಜನವರಿ 2025 (10:49 IST)
ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳವರೆಗೆ ಕರ್ನಾಟಕದಲ್ಲಿ ಭಾರೀ ಚಳಿಯ ವಾತಾವರಣ ಕಂಡುಬರಲಿದೆ. ಈ ವೇಳೆ ಕೆಲವೊಂದು ಟಿಪ್ಸ್ ಪಾಲಿಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ.

ಹವಾಮಾನ ಇಲಾಖೆ ವರದಿ ಪ್ರಕಾರ ಇಂದಿನಿಂದ ನಾಲ್ಕು ದಿನಗಳವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ದಾಖಲೆಯ ತಾಪಮಾನ ಇಳಿಕೆ ಕಂಡುಬರಲಿದೆ. ಪರಿಣಾಮ ವಿಪರೀತ ಚಳಿ, ಮೋಡ ಕವಿದ ವಾತಾವರಣ ಕಂಡುಬರಲಿದೆ.

ಬೀದರ್, ಗದಗ, ಕಲಬುರಗಿಯಲ್ಲಂತೂ ತಾಪಮಾನ ಕನಿಷ್ಠ ಮಟ್ಟಕ್ಕಿಳಿಯಲಿದೆ. ಬೆಂಗಳೂರಿನಲ್ಲೂ ನಿನ್ನೆ ಸಂಜೆಯಿಂದ ಮೋಡ ಕವಿದ ವಾತಾವರಣವಿದ್ದು ವಿಪರೀತ ಚಳಿಯಿದೆ. ಈ ವಾತಾವರಣ ಇನ್ನೂ ನಾಲ್ಕು ದಿನ ಮುಂದುವರಿಯಲಿದೆ.

ನಾಲ್ಕು ದಿನ ಇರಲಿ ಎಚ್ಚರ
ವಿಪರೀತ ಚಳಿಯ ಹಿನ್ನಲೆಯಲ್ಲಿ ಈ ನಾಲ್ಕು ದಿನ ಆರೋಗ್ಯದ ದೃಷ್ಟಿಯಿಂದ ಎಚ್ಚರಿಕೆಯಿಂದಿರುವುದು ಮುಖ್ಯ. ಅದರಲ್ಲೂ ವಿಶೇಷವಾಗಿ ಮಕ್ಕಳು, ವಯೋವೃದ್ಧರು ಬೆಳಿಗ್ಗಿನ ಜಾವ ಮತ್ತು ಸಂಜೆ ಮನೆಯೊಳಗೇ ಬೆಚ್ಚಗಿರುವುದು ಉತ್ತಮ. ಇನ್ನೇನು ಎರಡೇ ದಿನಗಳಲ್ಲಿ ಸಂಕ್ರಾಂತಿ ಬರಲಿದ್ದು, ವೀಕೆಂಡ್ ರಜೆ ಎಂದು ಸುತ್ತಾಡುವಾಗ ಎಚ್ಚರಿಕೆಯಿರಲಿ.

ವಿಪರೀತ ಚಳಿ, ಮೋಡ ಕವಿದ ವಾತಾವರಣದಿಂದ ಶೀತ ಸಂಬಂಧೀ ಆರೋಗ್ಯ ಸಮಸ್ಯೆ ಎದುರಾಗಬಹುದು. ಈ ಹಿನ್ನಲೆಯಲ್ಲಿ ಆಗಾಗ ಬಿಸಿ ನೀರಿನ ಸೇವನೆ ಮಾಡುತ್ತಿರಿ. ಆದಷ್ಟು ಸಂಜೆ ವೇಳೆ ಹೊರಗೆ ಸುತ್ತಾಡುವುದು ಕಡಿಮೆ ಮಾಡಿ. ಶಾಲೆಗೆ ಹೋಗುವ ಮಕ್ಕಳೂ ಆದಷ್ಟು ಗಾಳಿಯಾಡದಂತೆ ಎಚ್ಚರಿಕೆಯಿಂದ ಹೋದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments