Webdunia - Bharat's app for daily news and videos

Install App

Karnataka Weather: ಇಂದಿನಿಂದ ಹೆಚ್ಚಾಗಲಿದೆ ಮಳೆ ಅಬ್ಬರ, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Krishnaveni K
ಮಂಗಳವಾರ, 5 ಆಗಸ್ಟ್ 2025 (08:37 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರ ಮುಂಗಾರಿನ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಿತ್ತು. ಆದರೆ ಇಂದಿನಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಈ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕಳೆದ ಒಂದು ವಾರದಿಂದ ಕರಾವಳಿ ಜಿಲ್ಲೆ ಬಿಟ್ಟರೆ ಉಳಿದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಅಷ್ಟಾಗಿರಲಿಲ್ಲ. ಆದರೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ನಿರಂತರ ಮಳೆಯಾಗುತ್ತಲೇ ಇತ್ತು. ಆದರೆ ಇಂದಿನಿಂದ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಮಳೆ ತೀವ್ರವಾಗಲಿದೆ.

ವಿಶೇಷವಾಗಿ ಇಂದು ಕರ್ನಾಟಕದ ದಕ್ಷಿಣ ಭಾಗ ಮತ್ತು ಬೆಂಗಳೂರಿನಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಹೀಗಾಗಿ ಇಂದು ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.

ಉಳಿದಂತೆ ಬಾಗಲಕೋಟೆ, ಮೈಸೂರು, ಮಂಡ್ಯ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ರಾಮಗರ, ಚಾಮರಾಜನಗರ, ಕೊಪ್ಪಳ, ಕೊಡಗು, ಹಾಸನ, ವಿಜಯನಗರ ಜಿಲ್ಲೆಗಳಲ್ಲೂ ಇಂದು ಮಳೆ ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಂದು ವರ್ಷ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗಿಲ್ಲ ದಕ ಜಿಲ್ಲೆಗೆ ಎಂಟ್ರಿ

ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅವಿತು ಕಾಬೂಲ್‌ನಿಂದ ದೆಹಲಿಗೆ ಬಂದ ಬಾಲಕ

ವಿಧ್ಯುಕ್ತವಾಗಿ ದಸರಾಗೆ ಚಾಲನೆ ಸಿಕ್ಕ ಮರುದಿನವೇ ಚಾಮುಂಡಿಬೆಟ್ಟದಲ್ಲಿ ಸೂತಕದ ಛಾಯೆ, ಏನಾಯಿತು ಗೊತ್ತಾ

ನಮ್ಮ ಹಿಂದೂ ಹಬ್ಬಗಳು ತೊಂದರೆ ಎದುರಿಸುತ್ತಿರುವುದನ್ನು ಗಮನಿಸಿದ್ದೇನೆ: ದೆಹಲಿ ಸಿಎಂ

ಜಾತಿಗಣತಿ ಮಾಡುವ ಹಿಂದುಳಿದ ಆಯೋಗದ ರಿಮೋಟ್ ಕಂಟ್ರೋಲ್ ಎಲ್ಲೋ ಇದೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments