Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

Krishnaveni K
ಗುರುವಾರ, 18 ಡಿಸೆಂಬರ್ 2025 (08:40 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಕನಿಷ್ಠ ತಾಪಮಾನ ಕೆಲವೆಡೆ ದಾಖಲೆಯ ಮಟ್ಟಕ್ಕೆ ತಲುಪಿದೆ. ಇಂದಂತೂ ವಿಪರೀತ ಚಳಿಯ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ನಿನ್ನೆ ಕೆಲವೆಡೆ ಚಳಿಯ ಜೊತೆಗೆ ತುಂತುರು ಮಳೆಯೂ ಕಂಡುಬಂದಿತ್ತು. ಇಂದು ಮಳೆಯ ಸಾಧ್ಯತೆಯಿಲ್ಲ. ಆದರೆ ರಾಜ್ಯದ ಸರಾಸರಿ ಕನಿಷ್ಠ ತಾಪಮಾನವಂತೂ 15 ಡಿಗ್ರಿಗೆ ಕುಸಿಯಲಿದೆ. ವಿಶೇಷವೆಂದರೆ ಕರಾವಳಿ ಜಿಲ್ಲೆಗಳಲ್ಲೂ ವಿಪರೀತ ಚಳಿ ಕಂಡುಬರುತ್ತಿದೆ.

ಚಿಕ್ಕಮಗಳೂರು, ಕೊಡಗು, ಹಾಸನ, ರಾಮನಗರ, ಬೆಂಗಳೂರು, ಬೀದರ್, ಹುಬ್ಬಳ್ಳಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಕನಿಷ್ಠ ತಾಪಮಾನ 12-14 ಡಿಗ್ರಿಯೊಳಗಿರಲಿದೆ. ಈ ಜಿಲ್ಲೆಗಳಲ್ಲಿ ವಿಪರೀತ ಚಳಿಯ ಜೊತೆ ಮೋಡ ಕವಿದ ವಾತಾವರಣವೂ ಕಂಡುಬರಲಿದೆ.

ಉಳಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿದ್ದರೂ ಚಳಿಯೂ ಹೆಚ್ಚಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಇಂದು ಕನಿಷ್ಠ ತಾಪಮಾನ 15-16 ಡಿಗ್ರಿಯೊಳಗಿರಲಿದೆ. ವಾರಂತ್ಯಕ್ಕೆ ಇನ್ನಷ್ಟು ಚಳಿ ನಿರೀಕ್ಷಿಸಲಾಗಿದೆ. ಇಂದು ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 27 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಕಲ್ ಬೀಚ್‌ನಲ್ಲಿ ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು, ಇನ್ನಿಬ್ಬರ ರಕ್ಷಣೆ

ಹೈದರಾಬಾದ್‌ ಮೆಟ್ರೋ ಹಂತ 2ಕ್ಕೆ ಶೇ.100 ರಷ್ಟು ಹಣಕಾಸು ನೀಡಲು ತೆಲಂಗಾಣ ಸರ್ಕಾರ ಸಿದ್ಧ: ರೇವಂತ್ ರೆಡ್ಡಿ

ಅನೇಕ ಮುಂದುವರಿದ ದೇಶಗಳಿಗಿಂತ ಭಾರತ ವೇಗವಾಗಿದೆ: ಸ್ಲೋವಾಕ್ ಪ್ರಧಾನಿ ರಾಬರ್ಟ್ ಫಿಕೊ

ಫಾಕ್ಸ್‌ ಜೆನ್‌ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ, ಇಬ್ಬರು ಸಜೀವ ದಹನ, 7ಮಂದಿ ಗಾಯ

ಪಾಪ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಮಾಗಡಿ ಬಾಲಕೃಷ್ಣ ಒಂಟಿ ಕಣ್ಣಲ್ಲಿ ನೀರು ಹಾಕ್ತಿದ್ದಾರೆ: ಆರ್ ಅಶೋಕ್

ಮುಂದಿನ ಸುದ್ದಿ
Show comments