Webdunia - Bharat's app for daily news and videos

Install App

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

Krishnaveni K
ಗುರುವಾರ, 18 ಡಿಸೆಂಬರ್ 2025 (08:40 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಕನಿಷ್ಠ ತಾಪಮಾನ ಕೆಲವೆಡೆ ದಾಖಲೆಯ ಮಟ್ಟಕ್ಕೆ ತಲುಪಿದೆ. ಇಂದಂತೂ ವಿಪರೀತ ಚಳಿಯ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ನಿನ್ನೆ ಕೆಲವೆಡೆ ಚಳಿಯ ಜೊತೆಗೆ ತುಂತುರು ಮಳೆಯೂ ಕಂಡುಬಂದಿತ್ತು. ಇಂದು ಮಳೆಯ ಸಾಧ್ಯತೆಯಿಲ್ಲ. ಆದರೆ ರಾಜ್ಯದ ಸರಾಸರಿ ಕನಿಷ್ಠ ತಾಪಮಾನವಂತೂ 15 ಡಿಗ್ರಿಗೆ ಕುಸಿಯಲಿದೆ. ವಿಶೇಷವೆಂದರೆ ಕರಾವಳಿ ಜಿಲ್ಲೆಗಳಲ್ಲೂ ವಿಪರೀತ ಚಳಿ ಕಂಡುಬರುತ್ತಿದೆ.

ಚಿಕ್ಕಮಗಳೂರು, ಕೊಡಗು, ಹಾಸನ, ರಾಮನಗರ, ಬೆಂಗಳೂರು, ಬೀದರ್, ಹುಬ್ಬಳ್ಳಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಕನಿಷ್ಠ ತಾಪಮಾನ 12-14 ಡಿಗ್ರಿಯೊಳಗಿರಲಿದೆ. ಈ ಜಿಲ್ಲೆಗಳಲ್ಲಿ ವಿಪರೀತ ಚಳಿಯ ಜೊತೆ ಮೋಡ ಕವಿದ ವಾತಾವರಣವೂ ಕಂಡುಬರಲಿದೆ.

ಉಳಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿದ್ದರೂ ಚಳಿಯೂ ಹೆಚ್ಚಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಇಂದು ಕನಿಷ್ಠ ತಾಪಮಾನ 15-16 ಡಿಗ್ರಿಯೊಳಗಿರಲಿದೆ. ವಾರಂತ್ಯಕ್ಕೆ ಇನ್ನಷ್ಟು ಚಳಿ ನಿರೀಕ್ಷಿಸಲಾಗಿದೆ. ಇಂದು ರಾಜ್ಯದ ಗರಿಷ್ಠ ತಾಪಮಾನ ಸರಾಸರಿ 27 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಹತ್ತುವಾಗ ಬಿದ್ದುಹೋಗುವಂತಿದ್ದ ವೃದ್ಧರನ್ನು ದೇವರ ಹಾಗೇ ಕಾಪಾಡಿದ ಕ್ಲೀನರ್‌, Video

ಬಿಜೆಪಿ ಬಳ್ಳಾರಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ಛಲವಾದಿ ನಾರಾಯಣಸ್ವಾಮಿ

ಮುಂದಿನ ಚುನಾವಣೆಗೆ ನಾಗೇಂದ್ರ ನನ್ನ ವಿರುದ್ಧ ಸ್ಪರ್ಧಿಸಲಿ: ಶ್ರೀರಾಮುಲು ಸವಾಲು

ಆರ್‌ಎಸ್‌ಎಸ್‌ ವಿರುದ್ಧ ಅವಹೇಳನ, ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಬಿಗ್‌ ರಿಲೀಫ್‌

ನೇಪಾಳದ ಜಲಪ್ರಳಯದಲ್ಲಿ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 2,400ಕ್ಕೂ ಹೆಚ್ಚು ಮಂದಿ ಕಣ್ಮರೆ

ಮುಂದಿನ ಸುದ್ದಿ
Show comments