Select Your Language

Notifications

webdunia
webdunia
webdunia
webdunia

Karnataka Weather: ಕರಾವಳಿ ಸೇರಿದಂತೆ ಈ ಜಿಲ್ಲೆಗಳಿಗೆ ಇಂದು ಗುಡುಗು ಸಹಿತ ಮಳೆ ಸೂಚನೆ

Karnataka Rains
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆಯ ಅಬ್ಬರ ಇನ್ನೂ ಕಡಿಮೆಯಾಗಿಲ್ಲ.ಇಂದು ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಕಳೆದ ಒಂದು ವಾರದಿಂದ ರಾಜ್ಯದ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ಬೇಸಿಗೆ ಮಳೆಯಿಂದ ರೈತರಿಗೆ ಕೊಂಚ ನಷ್ಟವಾದರೂ ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನಕ್ಕೆ ಇದು ಕೊಂಚ ತಂಪು ನೀಡಿದೆ. ಇಂದೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಇದರ ಹೊರತಾಗಿ ಬೆಳಗಾವಿ ಜಿಲ್ಲೆಯಲ್ಲೂ ಇಂದು ಗುಡುಗು ಸಹಿತ ಮಳೆ ನಿರೀಕ್ಷಿಸಬಹುದಾಗಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.

ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿಯಷ್ಟು ತಲುಪಲಿದೆ. ರಾಜ್ಯದಲ್ಲಿ ಇಂದು ಗರಿಷ್ಠ ತಾಪಮಾನ ಸರಾಸರಿ 33 ಡಿಗ್ರಿಯಷ್ಟಿರಲಿದ್ದು ಕನಿಷ್ಠ ತಾಪಮಾನ ಸರಾಸರಿ 21 ಡಿಗ್ರಿಯಷ್ಟಿರಲಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ, ಕಾರಣ ಇಲ್ಲಿದೆ