Webdunia - Bharat's app for daily news and videos

Install App

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Krishnaveni K
ಶುಕ್ರವಾರ, 18 ಏಪ್ರಿಲ್ 2025 (08:21 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ, ಮೋಡ ಕವಿದ ವಾತಾವರಣವಿದೆ. ಇಂದೂ ಕೂಡಾ ಕೆಲವು ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಇಂದು ಮಳೆಯಾಗಬಹುದು ನೋಡಿ.

ಮಳೆಯ ಹೊರತಾಗಿಯೂ ರಾಜ್ಯದಲ್ಲಿ ತಾಪಮಾನವೇನೂ ಕಡಿಮೆಯಾಗಿಲ್ಲ. ಗರಿಷ್ಠ ತಾಪಮಾನ ಸರಾಸರಿ 32-34 ರ ಆಸುಪಾಸಿನಲ್ಲಿದೆ. ಒಂದೆಡೆ ಮಳೆ, ಇನ್ನೊಂದೆಡೆ ಬಿಸಿಲಿನ ಕಾವು ಇದರ ನಡುವೆ ಜನರು ಸುಸ್ತಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವಾರದಿಂದಲೇ ಆರಂಭವಾಗಿದ್ದ ಮಳೆ ನಿನ್ನೆಯವರೆಗೂ ಮುಂದುವರಿದಿತ್ತು. ಆದರೆ ಇನ್ನೆರಡು ದಿನಗಳಿಗೆ ಈ ಜಿಲ್ಲೆಯಲ್ಲಿ ಕೊಂಚ ವರುಣ ಬಿಡುವು ನೀಡುವ ಸಾಧ್ಯತೆಯಿದೆ. ಉಡುಪಿಯಲ್ಲೂ ಇಂದು ಮಳೆಯ ಸಾಧ್ಯತೆಯಿಲ್ಲ. ಆದರೆ ಕೊಡಗು, ಚಿಕ್ಕಮಗಳೂರು, ಹಾಸನ, ಹಾವೇರಿ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ಉಳಿದಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಕೊಂಚ ಕ್ಷೀಣವಾಗಿದೆ. ಮಂಗಳವಾರ ಮತ್ತು ಬುಧವಾರ ಸುರಿದಿದ್ದ ಮಳೆ ನಿನ್ನೆಗೆ ಕ್ಷೀಣವಾಗಿತ್ತು. ಇಂದೂ ಕೂಡಾ ಮೋಡ ಕವಿದ ವಾತಾವರಣ ಮತ್ತು ಕೆಲವು ಕಡೆ ತುಂತುರು ಹನಿಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments