Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ಇಂದು ಎಲ್ಲೆಲ್ಲಿ ಮಳೆ, ದಕ್ಷಿಣ ಕನ್ನಡಕ್ಕೆ ವಿಶೇಷ ಎಚ್ಚರಿಕೆ

Krishnaveni K
ಶನಿವಾರ, 12 ಏಪ್ರಿಲ್ 2025 (07:46 IST)
ಬೆಂಗಳೂರು: ರಾಜ್ಯದಲ್ಲಿ ಇದೀಗ ಮುಂಗಾರು ಪೂರ್ವ ಮಳೆಯ ಆಗಮನವಾಗಿದೆ. ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೊಂದೆಡೆ ತಾಪಮಾನವೂ ಗರಿಷ್ಠ ಮಟ್ಟದಲ್ಲಿದೆ. ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯಾಗಲಿದೆ ಮತ್ತು ದಕ್ಷಿಣ ಕನ್ನಡಕ್ಕೆ ವಿಶೇಷವಾಗಿ ಹವಾಮಾನ ವರದಿಗಳು ನೀಡುತ್ತಿರುವ ಎಚ್ಚರಿಕೆಯೇನು ಇಲ್ಲಿದೆ ನೋಡಿ ವಿವರ.

ಕರ್ನಾಟಕದ ಬಹುತೇಕ ಕಡೆ ಈಗಾಗಲೇ ಮುಂಗಾರು ಪೂರ್ವ ಮಳೆಯ ಆಗಮನವಾಗಿದೆ. ನಿನ್ನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕೆಲವು ಕಡೆ ಹನಿ ಮಳೆಯಾಗಿತ್ತು. ಇಂದೂ ಕೂಡಾ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಿಗೆ ಮಳೆಯ ಸೂಚನೆಯಿದೆ.

ದಕ್ಷಿಣ ಕನ್ನಡದಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ನಿನ್ನೆಯೂ ಬೆಳ್ಳಂ ಬೆಳಿಗ್ಗೆಯೇ ಮಳೆರಾಯನ ಅಬ್ಬರವಿತ್ತು. ಇಂದೂ ದಕ್ಷಿಣ ಕನ್ನಡದಲ್ಲಿ ಮಳೆಯ ಸೂಚನೆಯಿದೆ. ನಿನ್ನೆ ಗುಡುಗು ಸಹಿತ ಮಳೆಯಾಗಿತ್ತು. ಇಂದೂ ಕೂಡಾ ಹೆಚ್ಚು ಕಡಿಮೆ ಇದೇ ವಾತಾವರಣವಿರಲಿದೆ. ಇನ್ನೊಂದು ವಾರಗಳಿಗೆ ಕರಾವಳಿ ಜಿಲ್ಲೆಯಲ್ಲಿ ಮಳೆಯ ಅಬ್ಬರವಿರಲಿದ್ದು, ಕಡಲ ತೀರಗಳಿಗೆ ಹೋಗದೇ ಇರುವುದು ಉತ್ತಮ.

ಉಳಿದಂತೆ ಇಂದು ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಿಗೂ ಇಂದು ಮಳೆಯಾಗುವ ಸೂಚನೆಯಿದೆ. ಉಳಿದಂತೆ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 32 ಡಿಗ್ರಿ ತಲುಪುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments