Select Your Language

Notifications

webdunia
webdunia
webdunia
webdunia

Karnataka Weather: ಇಂದಿನ ಬಿಸಿಲಿನ ಝಳ ಹೆಚ್ಚಳ, ಹೊರಗೆ ಕಾಲಿಡುವ ಮುನ್ನ ಎಚ್ಚರಿಕೆ ಗಮನಿಸಿ

Karnataka Rains
ಬೆಂಗಳೂರು: ರಾಜ್ಯದಲ್ಲಿ ಈಗ ಬೇಸಿಗೆಯ ಬೇಗೆ ದಿನೇ ದಿನೇ ಹೆಚ್ಚಾಗುತ್ತಿದೆ. ಇಂದು ಬಿಸಿಲಿನ ಝಳ ಮತ್ತಷ್ಟು ಹೆಚ್ಚಳವಾಗಲಿದ್ದು, ಹೊರಗೆ ಕಾಲಿಡುವ ಮುನ್ನ ಎಚ್ಚರಿಕೆ ಗಮನಿಸಿ.
 

ಮಾರ್ಚ್ ನಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದೆ ಎಂದು ಈಗಾಗಲೇ ಹವಾಮಾನ ತಜ್ಞರು ಹೇಳಿದ್ದರು. ಅದೀಗ ಮೊದಲ ವಾರದಲ್ಲೇ ಅನುಭವಕ್ಕೆ ಬರುತ್ತಿದೆ. ಈ ವಾರ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗಿದ್ದು ಹಗಲಿಡೀ ವಿಪರೀತ ಬಿಸಿಲು ಕಂಡುಬರುತ್ತಿದೆ.

ನಿನ್ನೆಗೆ ಹೋಲಿಸಿದರೆ ಇಂದು ಗರಿಷ್ಠ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 33 ಡಿಗ್ರಿ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿಯಷ್ಟು ಕಂಡುಬರಲಿದೆ. ಹಗಲಿಡೀ ಶುಭ್ರ ಆಕಾಶವಿರಲಿದ್ದು, ವಿಪರೀತ ಬಿಸಿಲು ಕಂಡುಬರುವುದು.

ಇಂದು ಮಳೆಯ ಸಾಧ್ಯತೆಯಿಲ್ಲ. ರಾಯಚೂರು, ಬಳ್ಳಾರಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿಯಷ್ಟು ಕಂಡುಬರುವುದು. ಇಂತಹ ವಾತಾವರಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ಹೊರಗೆ ಕಾಲಿಡದಿರುವುದೇ ಸೂಕ್ತ.


Share this Story:

Follow Webdunia kannada

ಮುಂದಿನ ಸುದ್ದಿ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ