Webdunia - Bharat's app for daily news and videos

Install App

ಕರ್ನಾಟಕ ಲೋಕಸಭೆ ಚುನಾವಣೆ: ಮತದಾನ ಮಾಡಿದ ಮೇಲೆ ಈ ತಪ್ಪುಗಳನ್ನು ಮಾಡಲೇಬೇಡಿ

Krishnaveni K
ಶುಕ್ರವಾರ, 26 ಏಪ್ರಿಲ್ 2024 (09:49 IST)
ಬೆಂಗಳೂರು: ಇಂದು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಪಂದ್ಯಗಳು ನಡೆಯುತ್ತಿದೆ. ಬೆಳಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ತಪ್ಪದೇ ನಿಮ್ಮ ಮತಗಟ್ಟೆಗೆ ತೆರಳಿ ಮತ ಚಲಾಯಿಸಿ.
 

ಮತದಾನ ಮಾಡುವುದು ಅತ್ಯಂತ ಶ್ರೇಷ್ಠ ಕೆಲಸವಾಗಿದೆ. ನಾನೊಬ್ಬ ಮತದಾನ ಮಾಡದೇ ಇದ್ದರೂ ಏನು ವ್ಯತ್ಯಾಸವಾಗಲ್ಲ ಎಂಬ ಉಡಾಫೆ ಮನೋಭಾವ ಬೇಡ. ಮುಂದೆ ಆಯ್ಕೆಯಾಗಿ ಬರುವ ನಾಯಕರನ್ನು ಪ್ರಶ್ನಿಸಲು ಹಕ್ಕು ಇರಬೇಕೆಂದರೆ ಇಂದು ನಾವು ಮತ ಚಲಾಯಿಸಿದರೆ ಮಾತ್ರ ಸಾಧ‍್ಯ.

ಮತದಾನ ಮಾಡುವಾಗ ಕೆಲವೊಂದು ವಿಚಾರಗಳು ನಮ್ಮ ತಲೆಯಲ್ಲಿರಬೇಕು. ಒಬ್ಬರಿಗೆ ಒಮ್ಮೆ ಮಾತ್ರ ಮತದಾನ ಮಾಡಲು ಅವಕಾಶವಿದೆ. ಎರಡೆರಡು ಕಡೆ ತಪ್ಪಾಗಿ ಹೆಸರಿದೆ ಎಂದು ಕದ್ದುಮುಚ್ಚಿ ಎರಡು ಕಡೆ ವೋಟ್ ಮಾಡಲು ಹೋಗಬೇಡಿ. ಒಮ್ಮೆ ವೋಟ್ ಮಾಡಿದ ಮೇಲೆ ಕೈ ಬೆರಳ ಮೇಲೆ ಹಾಕಿದ ಷಾಯಿಯನ್ನು ಅಳಿಸಿ ಮತ್ತೊಮ್ಮೆ ಹಾಕುವ ದುಸ್ಸಾಹಸಕ್ಕೆ ಹೋಗಬೇಡಿ. ಇದು ಶಿಕ್ಷಾರ್ಹ ಅಪರಾಧವಾಗಿದೆ.

ಮತದಾನ ಮಾಡಲು ಬಂದ ಮೇಲೆ ಮತಗಟ್ಟೆಯಲ್ಲಿ ಯಾವುದೇ ಪಕ್ಷದ ಪರ ಪ್ರಚಾರ ಮಾಡುವಂತಿಲ್ಲ. ಮತ್ತು ಮತದಾನ ಮಾಡಿದ ಮೇಲೆ ಮತಗಟ್ಟೆಯಲ್ಲಿ ನಾನು ಯಾವ ಪಕ್ಷಕ್ಕೆ ಮತ ಹಾಕಿದ್ದೇನೆ ಎಂದು ಘಂಟಾಘೋಷವಾಗಿ ಹೇಳಿಕೊಳ್ಳಬೇಡಿ. ಮತದಾನ ಮಾಡುವಾಗ ಗೌಪ್ಯತೆ ಕಾಪಾಡುವುದು ಮುಖ್ಯ. ಹೀಗಾಗಿ ನಿಮ್ಮ ಮತ ಚಲಾವಣೆಯನ್ನು ಯಾರಿಗೂ ತೋರಿಸುವಂತಿಲ್ಲ. ಮತದಾನ ಮಾಡಲು ಹೋಗುವಾಗ ಗುರುತಿನ ಚೀಟಿಯನ್ನು ಮರೆಯದೇ ತೆಗೆದುಕೊಂಡು ಹೋಗಿ. ನಿಮ್ಮ ಮತವನ್ನು ಇನ್ನೊಬ್ಬರಿಗೆ ಹಾಕಲು ಹೇಳುವಂತಿಲ್ಲ. ಇವಿಷ್ಟನ್ನೂ ತಲೆಯಲ್ಲಿಟ್ಟುಕೊಂಡು ತಪ್ಪದೇ ಮತದಾನ ಮಾಡಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments