ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ ಒಂದೇ ಸ್ಥಾನ?

Webdunia
ಬುಧವಾರ, 7 ಜುಲೈ 2021 (13:47 IST)
ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನರಚನೆ ಇಂದು ಸಂಜೆ ನಡೆಯಲಿದ್ದು, ರಾಜ್ಯಕ್ಕೆ ಒಂದು ಸ್ಥಾನ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಬುಧವಾರ ಸಂಜೆ 6 ಗಂಟೆಗೆ ಸಂಪುಟ ಪುನರಚನೆ ನಡೆಯಲಿದ್ದು, ರಾಜ್ಯಕ್ಕೆ ಮೂರು ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಬಂದ ಮಾಹಿತಿ ಪ್ರಕಾರ ರಾಜ್ಯಕ್ಕೆ ಕೇವಲ ಒಂದು ಸ್ಥಾನ ಸೀಮಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಚಿತ್ರದುರ್ಗದ ಸಂಸದ ಎ.ನಾರಾಯಣಸ್ವಾಮಿ ಅವರಿಗೆ ಮಾತ್ರ ಸಚಿವ ಸ್ಥಾನ ನೀಡುವ ಸಾಧ್ಯತೆ ಇದ್ದು, ಉಳಿದ ಯಾರಿಗೂ ಸ್ಥಾನ ನೀಡಲಾಗುತ್ತಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ರಾಜ್ಯದ 8ರಿಂದ 10 ರಾಜ್ಯದ ಸಂಸದರಿಗೆ ಭಾರೀ ನಿರಾಸೆ ಉಂಟಾಗಿದೆ. ಲಿಂಗಾಯತರ ಕೋಟಾದಲ್ಲಿ ಸಚಿವ ಸ್ಥಾನ ನಿರೀಕ್ಷಿಸಿದ್ದ ಬಿ.ವೈ. ರಾಘವೇಂದ್ರ, ಶಿವಕುಮಾರ್ ಉದಾಸಿ, ಭಗವಂತ ಖೂಬಾಗಿಲ್ಲ ಅವರಿಗೆ ನಿರಾಸೆ ಆಗಲಿದೆ.
ರಾಜ್ಯದಿಂದ 25 ಮಂದಿ ಬಿಜೆಪಿ ಸಂಸದರಿದ್ದರೂ ಪ್ರಸ್ತುತ ಮೂವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದ್ದು, ಸದಾನಂದಗೌಡ, ಪ್ರಹ್ಲಾದ್ ಜೋಷಿ ಈಗಾಗಲೇ ಸಚಿವ ಸ್ಥನ ಅಲಂಕರಿಸಿದ್ದಾರೆ. ಈಗ ನಾರಾಯಣಸ್ವಾಮಿಗೆ ಮಾತ್ರ ಅವಕಾಶ ದೊರೆಯಲಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments