Webdunia - Bharat's app for daily news and videos

Install App

ಮಂಡ್ಯದ ಕೆರೆಗೋಡಿನಲ್ಲಿ ಹನುಮ ಧ್ವಜ ಹೋಯ್ತು, ತ್ರಿವರ್ಣ ಧ್ವಜ ಬಂತು

Krishnaveni K
ಮಂಗಳವಾರ, 21 ಮೇ 2024 (10:40 IST)
File photo
ಮಂಡ್ಯ: ತೀವ್ರ ವಿವಾದಕ್ಕೀಡಾಗಿದ್ದ ಮಂಡ್ಯ ಹನುಮಧ್ವಜ ಪ್ರಕರಣಕ್ಕೀಗ ಒಂದು ರೀತಿಯ ಅಂತ್ಯ ಸಿಕ್ಕಿದೆ. ಹನುಮಧ್ವಜವನ್ನು ಕೆಳಗಿಳಿಸಿದ್ದ ಜಿಲ್ಲಾಡಳಿತ ಈಗ ಆ ಜಾಗದಲ್ಲಿ ತ್ರಿವರ್ಣ ಧ್ವಜ ಹಾರಿಸಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ನೆನಪಿಗಾಗಿ ಮಂಡ್ಯದ ಕೆರೆಗೋಡಿನಲ್ಲಿ ಅರ್ಜುನ ಸ್ತಂಬದ ಮೇಲೆ ಹನುಮ ಧ್ವಜ ಹಾರಿಸಲಾಗಿತ್ತು. ಇದನ್ನು ಕೆಲವು ಸಮಯದ ಮೊದಲು ಜಿಲ್ಲಾಡಳಿತ ತೆರವುಗಳಿಸಿತ್ತು. ಇದು ತೀವ್ರ ವಿವಾದಕ್ಕೀಡಾಗಿತ್ತು. ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ, ಹಿಂದೂ ಸಂಘಟನೆಗಳ ನಡುವೆ ಸಂಘರ್ಷವೇರ್ಪಟ್ಟಿತ್ತು.

ಹಿಂದೂ ಸಂಘಟನೆಗಳು ಸ್ಥಳದಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದವು. ಈ ಘಟನೆ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಮತ್ತೆ ಹಿಂದೂ ಸಮಾಜದ ಕೆಂಗಣ್ಣಿಗೆ ಗುರಿಯಾಗಿಸಿತ್ತು. ಆದರೆ ಈಗ ಜಿಲ್ಲಾಡಳಿತ ಆ ಜಾಗದಲ್ಲಿ ಎತ್ತರದ ತ್ರಿವರ್ಣ ಧ್ವಜ ಹಾರಿಸಿದೆ. ಇಂದು ಬೆಳಿಗ್ಗೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಹಳೆ ಧ್ವಜ ಕೆಳಗಿಳಿಸಿ ಹೊಸ ಧ್ವಜ ಹಾರಿಸಲಾಗಿದೆ.

ಹಾಗಿದ್ದರೂ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ. ಇಷ್ಟು ದೊಡ್ಡ ಧ‍್ವಜಸ್ತಂಭದಲ್ಲಿ ಚಿಕ್ಕ ರಾಷ್ಟ್ರಧ್ವಜ ಹಾರಿಸಿ ಜಿಲ್ಲಾಡಳಿತ ರಾಷ್ಟ್ರಧ‍್ವಜಕ್ಕೆ ಅವಮಾನ ಮಾಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಜೂನ್ 4 ರಂದು ಮತ್ತೆ ಹನುಮ ಧ್ವಜ ತೆರವುಗೊಳಿಸಿದ್ದಕ್ಕೆ ಪ್ರತಿಭಟನೆ ನಡೆಯಲಿದೆ. ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಈ ಧ್ವಜಸ್ತಂಭ ನಿರ್ಮಿಸಿರುವುದರ ಮುಖ್ಯ ಉದ್ದೇಶ ಹನುಮಧ‍್ವಜ ಹಾರಿಸುವುದು. ಅದನ್ನು ಮತ್ತೆ ಪುನಸ್ಥಾಪಿಸುವುದು ನಮ್ಮ ಹೋರಾಟದ ಮುಖ್ಯ ಉದ್ದೇಶ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ISRO: ಭೂ ವೀಕ್ಷಣಾ ಉಪಗ್ರಹ ಉಡ್ಡಯನ ವಿಫಲಕ್ಕೆ ಕಾರಣ ಬಿಚ್ಚಿಟ್ಟ ಅಧ್ಯಕ್ಷ ನಾರಾಯಣನ್‌

Karnataka Weather: ರಾಜ್ಯದ 23 ಜಿಲ್ಲೆಗಳಲ್ಲಿ ಭಾರೀ ಮಳೆ ಅಲರ್ಟ್‌

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಮುಂದಿನ ಸುದ್ದಿ
Show comments