Webdunia - Bharat's app for daily news and videos

Install App

ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಜೊತೆ ಎಣ್ಣೆ, ಬೇಳೆ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದೇನು

Krishnaveni K
ಶನಿವಾರ, 7 ಸೆಪ್ಟಂಬರ್ 2024 (15:47 IST)
Photo Credit: Facebook
ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಮುಂದಿನ ತಿಂಗಳಿನಿಂದ 5 ಕೆಜಿ ಅಕ್ಕಿ ಜೊತೆಗೆ ಬೇಳೆ, ಎಣ್ಣೆ ಮತ್ತು ಸಕ್ಕರೆ ಕೊಡಲಾಗುತ್ತದೆ ಎಂದು ಸರ್ಕಾರ ಪ್ರಕಟಣೆ ನೀಡಿತ್ತು. ಈ ಬಗ್ಗೆ ಇಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದೇನು ನೋಡಿ.

ಇದೀಗ ಬಿಪಿಎಲ್ ಕಾರ್ಡ್ ದಾರರ ಪರಿಷ್ಕರಣೆ ನಡೆಯುತ್ತಿದೆ. ಆದಾಯ ಮಿತಿ ನೋಡಿಕೊಂಡು ಬಿಪಿಎಲ್ ಕಾರ್ಡ್ ಗೆ ಅರ್ಹರಲ್ಲದವರನ್ನು ಬಿಪಿಎಲ್ ಕಾರ್ಡ್ ನಿಂದ ತೆಗೆದು ಹಾಕಿ ನಂತರ ಅಕ್ಕಿ ಜೊತೆ ಬೇಳೆ, ಎಣ್ಣೆ ಅಥವಾ ಸಕ್ಕರೆ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಬೇರೆ ರಾಜ್ಯಗಳಲ್ಲಿ ಬಿಪಿಎಲ್ ಕಾರ್ಡ್ ದಾರರು ಶೇ.50 ಕ್ಕಿಂತ ಹೆಚ್ಚಿಲ್ಲ. ಆದರೆ ನಮ್ಮಲ್ಲಿ ಬಿಪಿಎಲ್ ಕಾರ್ಡ್ ದಾರರ ಸಂಖ್ಯೆಯೇ ಶೇ.80 ಕ್ಕಿಂತ ಹೆಚ್ಚಿದೆ. ಹೀಗಾಗಿ ಎಲ್ಲಿ ತಪ್ಪಾಗಿದೆ, ಅರ್ಹರಲ್ಲದವರಿಗೂ ಕೊಡಲಾಗಿದೆಯೇ ಎಂದು ಪರಿಶೀಲಿಸುವ ಕೆಲಸ ಮೊದಲು ಆಗಬೇಕಿದೆ ಎಂದಿದ್ದಾರೆ.

ಅದಾದ ಬಳಿಕ ಅಕ್ಕಿ ಜೊತೆ ಏನು ಕೊಡುವುದು ಸೂಕ್ತ ಎಂದು ತೀರ್ಮಾನಿಸಿ ನಂತರ ಕೊಡುತ್ತೇವೆ ಎಂದಿದ್ದಾರೆ. ಇನ್ನು, ಬಿಪಿಎಲ್ ಕಾರ್ಡ್ ಗೆ ಅರ್ಹರಲ್ಲದವರನ್ನು ಎಪಿಎಲ್ ಕಾರ್ಡ್ ಗೆ ಸೇರಿಸಲಾಗುತ್ತದೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ. ಮುಂದಿನ ತಿಂಗಳಿನಿಂದಲೇ ಅಕ್ಕಿ ಜೊತೆ ಬೇಳೆ, ಎಣ್ಣೆ ಕೊಡಲಾಗುವುದು ಎಂದು ಸರ್ಕಾರ ಘೋಷಣೆ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments