Select Your Language

Notifications

webdunia
webdunia
webdunia
webdunia

ಗಣೇಶ ಮೂರ್ತಿ ವಿಸರ್ಜನೆಗೆ ಖಾಕಿ ಬಿಗಿ ಬಂದೋಬಸ್ತ್

ಗಣೇಶ ಮೂರ್ತಿ ವಿಸರ್ಜನೆಗೆ ಖಾಕಿ ಬಿಗಿ ಬಂದೋಬಸ್ತ್
ಶಿವಮೊಗ್ಗ , ಭಾನುವಾರ, 24 ಸೆಪ್ಟಂಬರ್ 2023 (16:47 IST)
ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಇಂದು ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಪಥ ಸಂಚಲನ ನಡೆಸಲಾಯಿತು. ಪ್ರಮುಖ ಮತ್ತು ಸೂಕ್ಷ್ಮ ಸ್ಥಳಗಳಲ್ಲಿ ರೂಟ್‌ ಮಾರ್ಚ್‌ ನಡೆಸಲಾಯಿತು. ಅಲ್ಲದೆ, ರಾಗಿಗುಡ್ಡದಲ್ಲಿ ಬಂದೋಸ್ತ್‌ಗೆ ದೊಡ್ಡ ಸಂಖ್ಯೆಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 4DySP, 9 ಇನ್ಸ್‌ಪೆಕ್ಟರ್‌, 15 ಸಬ್‌ ಇನ್ಸ್‌ಪೆಕ್ಟರ್‌, 31 ASI, 189 ಹೆಡ್‌ಕಾನ್ಸ್‌ಟೇಬಲ್‌ ಮತ್ತು ಕಾನ್ಸ್‌ಟೇಬಲ್‌ಗಳು, 110 ಗೃಹರಕ್ಷಕ ದಳ ಸಿಬ್ಬಂದಿ, 1 DAR ತುಕಡಿ, 6 KSRP ತುಕಡಿ ನಿಯೋಜನೆ ಮಾಡಲಾಗಿದ್ದು, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ರಾಗಿಗುಡ್ಡದಲ್ಲಿ ಬ್ರೀಫಿಂಗ್‌ ನಡೆಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡಿಗೆ ನೀರು ಹರಿವಿನ ಪ್ರಮಾಣ ಹೆಚ್ಚಳ!