Webdunia - Bharat's app for daily news and videos

Install App

ಸಂಪುಟದಲ್ಲಿ ಚರ್ಚಿಸಿ ಕಿತ್ತೂರು ಕರ್ನಾಟಕ ಘೊಷಣೆ

Webdunia
ಗುರುವಾರ, 21 ಅಕ್ಟೋಬರ್ 2021 (08:46 IST)
ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾದ 'ಕಿತ್ತೂರು ಕರ್ನಾಟಕ 'ಘೊಷಣೆ ಕುರಿತು ಸಂಪುಟದಲ್ಲಿ ರ್ಚಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್-ಕರ್ನಾಟಕ ಭಾಗವನ್ನು 'ಕಲ್ಯಾಣ ಕರ್ನಾಟಕ' ಎಂದು ಘೊಷಣೆ ಮಾಡಿರುವಂತೆ ಬೆಳಗಾವಿ ಭಾಗವನ್ನು 'ಕಿತ್ತೂರು ಕರ್ನಾಟಕ' ಎಂದು ಘೊಷಿಸುವ ಕುರಿತು ಸಚಿವ ಸಂಪುಟದಲ್ಲಿ ರ್ಚಚಿಸಲಾಗುವುದು. ಆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು. ಅ.23ರಿಂದ ಎರಡು ದಿನ ಜರುಗಲಿರುವ ಕಿತ್ತೂರು ಉತ್ಸವದಲ್ಲಿ ಭಾಗವಹಿಸುತ್ತೇನೆ ಎಂದರು.
ಕೋವಿಡ್-19 ಕಾರಣದಿಂದಾಗಿ ಅದ್ದೂರಿ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಿಲ್ಲ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಅದ್ದೂರಿ ರಾಜ್ಯೋತ್ಸವ ಆಚರಣೆಗೆ ವಿವಿಧ ಕನ್ನಡಪರ ಸಂಘಟನೆಗಳು ಒತ್ತಾಯ ಮಾಡಿರುವುದು ಗಮನಕ್ಕೆ ಬಂದಿದೆ. ಈ ಕುರಿತು ತಜ್ಞರ ಸಮಿತಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ರ್ಚಚಿಸಿ, ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments