Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಾಜ್ಯದಲ್ಲಿ ಈಗ ನಾಯಕತ್ವ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಇದರ ನಡುವೆ ಯುಗಾದಿ ನಡುವೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಬಹುದೇ ಎಂಬ ಪ್ರಶ್ನೆಗೆ ಕೋಡಿ ಮಠದ ಶ್ರೀಗಳು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.
ಈ ಮೊದಲು ಸಂಕ್ರಾಂತಿ ಬಳಿಕ ಕ್ರಾಂತಿಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಹೈಕಮಾಂಡ್ ಯಾಕೋ ನಾಯಕತ್ವ ಬದಲಾವಣೆ ವಿಚಾರದಲ್ಲಿ ಇದುವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ತಯಾರಾಗಿಲ್ಲ. ಈಗಲೂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯನವರನ್ನು ಕರೆದು ಮಾತುಕತೆ ನಡೆಸಲು ಮನಸ್ಸು ಮಾಡುತ್ತಿಲ್ಲ.
ಹಾಗಿದ್ದರೂ ಯುಗಾದಿ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಬಹುದು ಎಂಬ ನಿರೀಕ್ಷೆಯಿದೆ. ಈ ಬಗ್ಗೆ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಯುಗಾದಿ ಬಳಿಕ ಸಿಎಂ ಬದಲಾವಣೆಯಾಗಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ಅವರಾಗಿಯೇ ಬಿಟ್ಟುಕೊಟ್ಟರೆ ಮಾತ್ರ ಬದಲಾವಣೆಯಾಗಬಹುದು ಎಂಬರ್ಥದಲ್ಲಿ ಹೇಳಿದ್ದಾರೆ.
ಯುಗಾದಿ ನಂತರವೂ ಕರ್ನಾಟಕ ರಾಜಕೀಯದಲ್ಲಿ ಯಾವುದೇ ಸಮಸ್ಯೆಯಾಗಲ್ಲ. ಸಿಎಂ ಬದಲಾವಣೆ ಆಗಬೇಕು ಎಂದರೆ ಸಿದ್ದರಾಮಯ್ಯನವರೇ ಇಚ್ಛೆ ಪಟ್ಟು ಪಟ್ಟದಿಂದ ಕೆಳಗಿಳಿದರೆ ಮಾತ್ರ ಆಗುತ್ತದೆ ಎಂದಿದ್ದಾರೆ.