Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಾಜ್ಯದಲ್ಲಿ ಅದರಲ್ಲಿಯೂ ಬೆಂಗಳೂರು ನಗರದಲ್ಲಿ ಕೋವಿಡ್-19 ಹಾಗೂ ಒಮಿಕ್ರಾನ್ ಸೋಂಕು ವ್ಯಾಪಿಸುತ್ತಿದೆ. ಇದರ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ 6.30ಕ್ಕೆ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಆರೋಗ್ಯ ಸಚಿವರು, ಕಂದಾಯ ಸಚಿವರು, ಸಾರಿಗೆ ಸಚಿವರು, ಉನ್ನತ ಶಿಕ್ಷಣ ಸಚಿವರು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗಳ ಸಹಿತ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.