ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತ ಯು.ಬಿ. ಶೆಟ್ಟಿ ಮನೆ ಮೇಲೆ ಐಟಿ ದಾಳಿ

Webdunia
ಬುಧವಾರ, 3 ನವೆಂಬರ್ 2021 (22:06 IST)
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತ ಯು.ಬಿ. ಶೆಟ್ಟಿ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಹೊಸ ವಿಚಾರವೊಂದು ಬಯಲಾಗಿದೆ. ಯು.ಬಿ. ಶೆಟ್ಟಿ ಬಳಿ ದಾಖಲೆ ಇಲ್ಲದ 70 ಕೋಟಿ ಮೌಲ್ಯದ ಆದಾಯ ಪತ್ತೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅ. 28 ರಂದು ಯು.ಬಿ. ಶೆಟ್ಟಿಗೆ ಸೇರಿದ ಹಲವು ಕಡೆ ದಾಳಿ ನಡೆಸಲಾಗಿತ್ತು. ಉಡುಪಿ, ಧಾರವಾಡದ ಮನೆ, ಮಂಗಳೂರಿನಲ್ಲಿ ಐಟಿ ದಾಳಿ ಮಾಡಲಾಗಿತ್ತು. ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಈ ವೇಳೆ ಸಿವಿಲ್ ಗುತ್ತಿಗೆದಾರನಾಗಿದ್ದ ಡಿ.ಕೆ. ಶಿವಕುಮಾರ್ ಆಪ್ತ ಯು.ಬಿ. ಶೆಟ್ಟಿ ಮನೆಯಲ್ಲಿ ಬೋಗಸ್ ಬಿಲ್​​ಗಳು, ಎಲೆಕ್ಟ್ರಾನಿಕ್ ಡಿವೈಸ್​ಗಳು ಪತ್ತೆಯಾಗಿವೆ. ಉತ್ತರ ಕರ್ನಾಟಕದಲ್ಲಿ ನೀರಾವರಿಗೆ ಕೆಲವು ಪ್ರಾಜೆಕ್ಟ್ ವಹಿಸಿಕೊಂಡಿದ್ದರು. ಪ್ರಾಜೆಕ್ಟ್ ನಿರ್ಮಾಣದ ವೇಳೆ ನಕಲಿ ಬಿಲ್ ತೋರಿಸಿ, ಕಬ್ಬಿಣ ಹಲವು ಸಾಮಗ್ರಿ ಖರೀದಿಸಿ ಹಣ ಮಂಜೂರು ಮಾಡಿಸಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ. ಶೆಟ್ಟಿ ಕಂಪನಿ ನಕಲಿ ಬಿಲ್ ತೋರಿಸಿ ಹಣ ಮಂಜೂರು ಮಾಡಿಸಿಕೊಂಡಿತ್ತು ಎಂದು ಹೇಳಲಾಗಿದೆ.
ದಾಳಿ ವೇಳೆ ನೈಜವಲ್ಲದ ಕ್ಲೈಮ್‌ಗಳನ್ನು ಸೂಚಿಸುವ ಡಿಜಿಟಲ್ ಪುರಾವೆಗಳು ಹಾಗೂ ವಸ್ತುಗಳ ಮಾರಾಟಗಾರರು ಮತ್ತು ಪೂರೈಕೆದಾರರಂತಹ ಪ್ರಮುಖ ಗುಂಪಿನ ವ್ಯಕ್ತಿಯಿಂದ ಲೆಕ್ಕಕ್ಕೆ ಸಿಗದ ಹಣ ಸೇರಿದಂತೆ ವಿವಿಧ ದಾಖಲೆಗಳನ್ನು ಆದಾಯ ಇಲಾಖೆ ವಶಪಡಿಸಿಕೊಂಡಿದೆ.
ಸಂಸ್ಥೆಯ ಮಾಲೀಕರ ಯಾವುದೇ ಕೆಲಸವನ್ನೂ ಮಾಡದ ಕುಟುಂಬ ಸದಸ್ಯರು, ಸ್ನೇಹಿತರು, ಉದ್ಯೋಗಿಗಳನ್ನೇ ಉಪಗುತ್ತಿಗೆದಾರರ ಹೆಸರಿನಲ್ಲಿ ಹಣ ಪಡೆದು ಲಾಭ ಮರೆಮಾಚುವುದಕ್ಕೆ ಸಹಕರಿಸುತ್ತಿದ್ದರು ಎಂಬುದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments