Webdunia - Bharat's app for daily news and videos

Install App

ಮೋದಿ ಫೋಟೋ ಬಳಸದೇ ನೀವು ಗೆದ್ದು ತೋರಿಸಿ ನೋಡೋಣ: ಯಡಿಯೂರಪ್ಪಗೆ ಈಶ್ವರಪ್ಪ ಸವಾಲು

Krishnaveni K
ಗುರುವಾರ, 11 ಏಪ್ರಿಲ್ 2024 (14:01 IST)
ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಆಂಡ್ ಸನ್ಸ್ ವಿರುದ್ಧ ತೊಡೆತಟ್ಟಿರುವ ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಆದರೆ ಈಶ್ವರಪ್ಪ ಪ್ರಚಾರಕ್ಕೆ ಮೋದಿ ಫೋಟೋ ಬಳಸುವುದು ರಾಜ್ಯ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಇದಕ್ಕಾಗಿ ಚುನಾವಣಾ ಆಯೋಗದ ಮೊರೆ ಹೋಗಿರುವ ಯಡಿಯೂರಪ್ಪ ಬಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಈಶ್ವರಪ್ಪ ಮೋದಿ ಫೋಟೋ ಬಳಸಬಾರದು ಎಂದು ತಗಾದೆ ತೆಗೆದಿದೆ.

ಇದೀಗ ಇದಕ್ಕೆ ತಿರುಗೇಟು ನೀಡಿರುವ ಕೆಎಸ್ ಈಶ್ವರಪ್ಪ, ಹಾಗಿದ್ದರೆ ಶಿವಮೊಗ್ಗದಲ್ಲಿ ಯಡಿಯೂರಪ್ಪ ಮೋದಿ ಫೋಟೋ ಬಳಸದೇ ಮಗನನ್ನು ಗೆಲ್ಲಿಸಿಕೊಂಡು ಬರಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಎಡಭಾಗದಲ್ಲಿ ವಿಜಯೇಂದ್ರ, ಇನ್ನೊಂದು ಕಡೆ ಯಡಿಯೂರಪ್ಪ ಫೋಟೋ ಬಳಸಿ ಮಗನನ್ನು ಗೆಲ್ಲಿಸಲಿ ಎಂದಿದ್ದಾರೆ.

‘ಮೋದಿ ಫೋಟೋ ಬಳಸದಂತೆ ತಡೆಯಲು ಅವರು ಯಾರು? ಮೋದಿ ವಿಶ್ವ ನಾಯಕ. ಅವರನ್ನು ಹೃದಯದಲ್ಲಿಟ್ಟುಕೊಂಡು ಆರಾಧಿಸುತ್ತೇನೆ. ನನ್ನನ್ನು ಯಾರೂ ತಡೆಯಲಾಗದು’ ಎಂದು ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments