Webdunia - Bharat's app for daily news and videos

Install App

ಫೆ.08 ರಂದು ಕುಡಿಯಡ ಮಂದ್ ನಮ್ಮೆ ಕಾರ್ಯಕ್ರಮ

Webdunia
ಮಂಗಳವಾರ, 8 ಫೆಬ್ರವರಿ 2022 (20:29 IST)
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ನಾಲ್ನಾಡ್ ಕುಡಿಯಡ ಮಂದ್ನಮ್ಮೆ ಸಮಿತಿ ವತಿಯಿಂದ ಯವಕಪಾಡಿಯ ಕುಡಿಯಡ ಮಂದ್ ನಲ್ಲಿ ಫೆಬ್ರವರಿ, 08 ರಂದು ಬೆಳಗ್ಗೆ 10 ಗಂಟೆಗೆ ಕುಡಿಯಡ ಮಂದ್ ನಮ್ಮೆ ಕಾರ್ಯಕ್ರಮ ನಡೆಯಲಿದೆ.   
       ಯವಕಪಾಡಿಯ ಹಿರಿಯ ಜಾನಪದ ಕಲಾವಿದರ ಪಡಿಯಮಲೆ ಗಣೇಶ್ ಬಿದ್ದಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಪೊಂಗುರಿ ತ್ರೈಮಾಸಿಕ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. 
      ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಂಜಮ್ಮ ಜೋಗತಿಯಮ್ಮ, ತಮಿಳುನಾಡು ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗದ ಸದಸ್ಯರಾದ ಲೀಲಾವತಿ ಧನ್ರಾಜ್, ಕುಂಜಿಲ-ಕಕ್ಕಬ್ಬೆ ಗ್ರಾ.ಪಂ.ಅಧ್ಯಕ್ಷರಾದ ಕಲಿಯಂಡ ಸಂಪನ್ ಅಯ್ಯಪ್ಪ, ಕುಂಜಿಲ ಕಕ್ಕಬ್ಬೆ ಗ್ರಾ.ಪಂ.ಯ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಭರತ್ಚಂದ್ರ ದೇವಯ್ಯ, ನಾಲಡಿ ಗ್ರಾಮದ ಹಿರಿಯ ಜಾನಪದ ಕಲಾವಿದರಾದ ಕೋಡಿಮಣಿಯಂಡ ಬೋಪಯ್ಯ, ನಿವೃತ್ತ ಸೇನಾಧಿಕಾರಿ ಕುಯಿನಾಲಮಲೆ ಎಸ್.ಬೋಪಯ್ಯ ಹಾಗೂ ನಾಪೋಕ್ಲು ಹಿರಿಯ ಜಾನಪದ ಕಲಾವಿದರಾದ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.  
       ಕೋಪಟ್ಟಿಮಲೆ ರೋಹಿಣಿ ಸುನೀಲ್ ಅವರು ಕುಡಿಯಡ ದೇವನೆಲೆ ವಿಷಯದಲ್ಲಿ ವಿಚಾರ ಮಂಡನೆ ಮಾಡಲಿದ್ದಾರೆ. ಯವಕಪಾಡಿಯ ಹಿರಿಯ ಜಾನಪದ ಕಲಾವಿದರಾದ ಕೋಲಿಂದಮಲೆ ಎ.ಬೋಪಯ್ಯ, ನಾಪೋಕ್ಲು ಹಿರಿಯ ಜಾನಪದ ಕಲಾವಿದರಾದ ಚೀಯಕ್ಪೂವಂಡ ದೇವಯ್ಯ, ಕೊಳಕೇರಿ ಹಿರಿಯ ಜಾನಪದ ಕಲಾವಿದರಾದ ಕುಂಡ್ಯೋಳಂಡ ಸುಬ್ಬಯ್ಯ ಮತ್ತು ಕೋಪಟ್ಟಿ ಗ್ರಾಮದ ಕಿರಿಯ ಕರಾಟೆಪಟು ಕೆ.ಪಿ.ಚಂಗಪ್ಪ ಚೇತನ್ ಅವರನ್ನು ಸನ್ಮಾನಿಸಲಾಗುವುದು.  
      ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಕುಡಿಯರ ಮುತ್ತಪ್ಪ ಅವರು ಸಂಚಾಲಕರಾಗಿ ಕೆಲಸ ನಿರ್ವಹಿಸಲಿದ್ದಾರೆ. ಅಲ್ಲದೆ ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳು, ಹಳೆಯ ಪರಿಕರದ ವಸ್ತು ಪ್ರದರ್ಶನ ಹಾಗೂ ಅಕಾಡೆಮಿ ಪ್ರಕಟಿತ ಪುಸ್ತಕ ಮತ್ತು ಸಿ.ಡಿ.ಗಳ ಪ್ರದರ್ಶನ ಮತ್ತು ಮಾರಾಟ ಜರುಗಲಿದೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.  ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯಕ್ರಮ ನಡೆಸಲಾಗುವುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಅಜ್ಜಿಕುಟ್ಟಿರ ಸಿ.ಗಿರೀಶ್ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments